September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ

ಉಜಿರೆ : ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಸಮಿತಿ (POSH) ವತಿಯಿಂದ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಕರ್ನಾಟಕದ ಹೈಕೋರ್ಟ್‌ನ ವಕೀಲ ಜಿತಿನ್ ಜೀಜೊ ಅವರು ಈ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಮಹಿಳೆಯರ ಕಾನೂನು, ಹಕ್ಕುಗಳು, ಸುರಕ್ಷತಾ ಮುನ್ನೆಚ್ಚರಿಕೆಗಳು ಮತ್ತು ಕಿರುಕುಳವನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಚರ್ಚಿಸಿದರು. ಸಂವಾದಾತ್ಮಕ ಅಧಿವೇಶನವು ವಿದ್ಯಾರ್ಥಿಗಳಿಗೆ ವೈಯಕ್ತಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಾನೂನು ರಕ್ಷಣೆ ಮತ್ತು ಹಕ್ಕುಗಳ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಒದಗಿಸಿತು. ಮಹಿಳೆಯರನ್ನು ಜಾಗೃತಿ ಮತ್ತು ಸಬಲೀಕರಣಗೊಳಿಸುವ ಉದ್ದೇಶದಿಂದ ಈ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು.

ಎಸ್‌ ಡಿ ಎಂ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಸಂತೋಷ ಅದ್ಯಕ್ಷತೆಯನ್ನು ವಹಿಸಿದ್ದರು. ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಸಮಿತಿ (POSH) ಮುಖ್ಯಸ್ಥೆಯಾದ ಮೇರಿ ಸ್ಮಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು . ಮಹಿಳಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Related posts

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

Suddi Udaya

ಡಿ.17 : ರೆಖ್ಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ

Suddi Udaya

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

Suddi Udaya

ಎ.22: ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಹರಿ ದರ್ಶನ” ಯಕ್ಷಗಾನ ಬಯಲಾಟ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸನ್ಮಾನ

Suddi Udaya
error: Content is protected !!