26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

ವಂಶಪಾರಂಪರ್ಯ ಆಯುರ್ವೇದ ಪಂಡಿತ, ನಾಡಿ ತಜ್ಞ, ‘ ಕರ್ನಾಟಕ ವೈದ್ಯರತ್ನ’ ಪ್ರಶಸ್ತಿ ಪುರಸ್ಕೃತ ಡಾ| ಸಲೀಂ ಗರ್ಡಾಡಿ ಅವರಿಗೆ ‘ ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ‘ ಲಭಿಸಿದೆ.

ಶಿವಮೊಗ್ಗ ಜಿಲ್ಲಾ ಪಂಚಾಯತ್, ಶಿಕಾರಿಪುರ ತಾಲೂಕು ಪಂಚಾಯತ್, ಗೊದ್ದನಕೊಪ್ಪ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಮಿತಿಗಳ ಆಶ್ರಯದಲ್ಲಿ ಶಿವಮೊಗ್ಗದಲ್ಲಿ ನಡೆದ ‘ಜಾನಪದ ಯುವಜನೋತ್ಸವ’ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಿತು.


ಮೂಡುಬಿದಿರೆ ಸಮೀಪದ ಗರ್ಡಾಡಿಯವರಾಗಿದ್ದು ಮೂಡುಬಿದಿರೆಯಲ್ಲಿ ಸಂಜೀವಿನಿ ಆಯುರ್ವೇದಿಕ್ ಸಂಸ್ಥೆಯನ್ನು ಹೊಂದಿರುವ ವೈದ್ಯ ಎಂ.ಕೆ.ಗರ್ಡಾಡಿ ಅವರ ಪುತ್ರರಾಗಿರುವ ಸಲೀಂ ಗರ್ಡಾಡಿ ಅವರು ಪ್ರಸ್ತುತ ಚಿಕ್ಕಮಗಳೂರಿನಲ್ಲಿ ಅಮೃತ ಸಂಜೀವಿನಿ ಆಯುರ್ವೇದಿಕ್ ಸಂಸ್ಥೆಯನ್ನು ಮುಂದುವರಿಸುತ್ತಿದ್ದಾರೆ.


ವಂಶಪಾರಂಪರ್ಯ ಆಯುರ್ವೇದ ಕ್ಷೇತ್ರದಲ್ಲಿ ಎಲೆಮರೆಕಾಯಿಯಂತೆ ಗಣನೀಯ ಸೇವೆ ಸಲ್ಲಿಸಿರುವ ಇವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

Related posts

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಲಾಯಿಲ ಶಿವ ದುರ್ಗಾ ಟೈಗರ್ಸ್ ವತಿಯಿಂದ 5ನೇ ವರ್ಷದ ಪಿಲಿ ನಲಿಕೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರುನಾಡು Got ಟ್ಯಾಲೆಂಟ್ ರಿಯಾಲಿಟಿ ಶೋ ಗೆ ಆಯ್ಕೆಯಾದ ಉಜಿರೆಯ ಹಿಪ್-ಬಾಯ್ಸ್ ನೃತ್ಯ ತಂಡ

Suddi Udaya

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya
error: Content is protected !!