July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

ವಂಶಪಾರಂಪರ್ಯ ಆಯುರ್ವೇದ ಪಂಡಿತ, ನಾಡಿ ತಜ್ಞ, ‘ ಕರ್ನಾಟಕ ವೈದ್ಯರತ್ನ’ ಪ್ರಶಸ್ತಿ ಪುರಸ್ಕೃತ ಡಾ| ಸಲೀಂ ಗರ್ಡಾಡಿ ಅವರಿಗೆ ‘ ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ‘ ಲಭಿಸಿದೆ.

ಶಿವಮೊಗ್ಗ ಜಿಲ್ಲಾ ಪಂಚಾಯತ್, ಶಿಕಾರಿಪುರ ತಾಲೂಕು ಪಂಚಾಯತ್, ಗೊದ್ದನಕೊಪ್ಪ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಮಿತಿಗಳ ಆಶ್ರಯದಲ್ಲಿ ಶಿವಮೊಗ್ಗದಲ್ಲಿ ನಡೆದ ‘ಜಾನಪದ ಯುವಜನೋತ್ಸವ’ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಿತು.


ಮೂಡುಬಿದಿರೆ ಸಮೀಪದ ಗರ್ಡಾಡಿಯವರಾಗಿದ್ದು ಮೂಡುಬಿದಿರೆಯಲ್ಲಿ ಸಂಜೀವಿನಿ ಆಯುರ್ವೇದಿಕ್ ಸಂಸ್ಥೆಯನ್ನು ಹೊಂದಿರುವ ವೈದ್ಯ ಎಂ.ಕೆ.ಗರ್ಡಾಡಿ ಅವರ ಪುತ್ರರಾಗಿರುವ ಸಲೀಂ ಗರ್ಡಾಡಿ ಅವರು ಪ್ರಸ್ತುತ ಚಿಕ್ಕಮಗಳೂರಿನಲ್ಲಿ ಅಮೃತ ಸಂಜೀವಿನಿ ಆಯುರ್ವೇದಿಕ್ ಸಂಸ್ಥೆಯನ್ನು ಮುಂದುವರಿಸುತ್ತಿದ್ದಾರೆ.


ವಂಶಪಾರಂಪರ್ಯ ಆಯುರ್ವೇದ ಕ್ಷೇತ್ರದಲ್ಲಿ ಎಲೆಮರೆಕಾಯಿಯಂತೆ ಗಣನೀಯ ಸೇವೆ ಸಲ್ಲಿಸಿರುವ ಇವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

Related posts

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

Suddi Udaya

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya

ಬಳಂಜ ಜ್ಯೋತಿ ಯುವತಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya
error: Content is protected !!