25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದಸರಾ ಕವಿಗೋಷ್ಠಿ-2025ರಲ್ಲಿ ವಸಂತಿ ಟಿ. ನಿಡ್ಲೆ

ಬೆಳ್ತಂಗಡಿ : ದಸರಾ ಕವಿಗೋಷ್ಠಿ – 2025’ ನವರಸ ರಂಜನೆಯ ಬಹುಭಾಷಾ ಕವಿಮೇಳವನ್ನು ಅಕ್ಟೋಬರ್ 2 ವಿಜಯ ದಶಮಿ ಯಂದು ಮಂಗಳಾದೇವಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಸ್.ಪ್ರದೀಪ ಕುಮಾರ್ ಕಲ್ಕೂರ ಕವಿಗೋಷ್ಠಿಯನ್ನು ಉದ್ಘಾಟಿಸುವರು.

ಕವಿ – ಸಾಹಿತಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ 10 ಮಂದಿ ಪ್ರಮುಖ ಕವಿಗಳು ಭಾಗವಹಿಸಲಿದ್ದು, 10 ಜನ ಕವಿಗಳಲ್ಲಿ ಬೆಳ್ತಂಗಡಿ ತಾಲೂಕಿನಿಂದ ವಸಂತಿ ಟಿ ನಿಡ್ಲೆ ಓರ್ವರಾಗಿರುತ್ತಾರೆ. ಬಹುಮುಖ ಪ್ರತಿಭಾ ಸಂಪನ್ನೆಯಾಗಿರುವ ಇವರು ವೃತ್ತಿಯಲ್ಲಿ ಶಿಕ್ಷಕಿ. ಪ್ರವೃತ್ತಿ ಯಲ್ಲಿ ಕವಯತ್ರಿ, ಲೇಖಕಿ, ಯಕ್ಷಗಾನ ಕಲಾವಿದೆ.ಹಲವಾರು ಸಾಹಿತ್ಯ ಸಮ್ಮೇಳನ ಗಳಲ್ಲಿ ಸಂಪನ್ಮೂಲ ವ್ಯಕ್ತಿ ಯಾಗಿ ಭಾಗವಹಿಸಿರುವ ಇವರು 2024ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿ, ಒಟ್ಟು 1 ರಾಷ್ಟ್ರ ಪ್ರಶಸ್ತಿ, 8 ರಾಜ್ಯ ಪ್ರಶಸ್ತಿ, 1 ಜಿಲ್ಲಾ ಪ್ರಶಸ್ತಿ 2 ತಾಲೂಕು ಮಟ್ಟದ ಪ್ರಶಸ್ತಿ. ಹೀಗೆ 12 ಪ್ರಶಸ್ತಿ ಗಳನ್ನು ಮುಡಿಗೇರಿ ಸಿಕೊಂಡ ಅಪ್ರತಿಮ ಸಾಧಕಿ ಎಂಬ ಹೆಗ್ಗಳಿಕೆಗೆ ಪಾತ್ರ ರಾಗಿದ್ದಾರೆ.

Related posts

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಸಮಿತಿ ರಚನೆ

Suddi Udaya

ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ

Suddi Udaya

ಹೋಲಿ ರಿಡೀಮರ್ ಶಾಲಾ ಅಂಗಳದಲ್ಲಿ ಕೆಂಪು ಕಲರವ

Suddi Udaya
error: Content is protected !!