July 23, 2026
ಅಭಿನಂದನೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದಸರಾ ಕವಿಗೋಷ್ಠಿ-2025ರಲ್ಲಿ ವಸಂತಿ ಟಿ. ನಿಡ್ಲೆ

ಬೆಳ್ತಂಗಡಿ : ದಸರಾ ಕವಿಗೋಷ್ಠಿ – 2025’ ನವರಸ ರಂಜನೆಯ ಬಹುಭಾಷಾ ಕವಿಮೇಳವನ್ನು ಅಕ್ಟೋಬರ್ 2 ವಿಜಯ ದಶಮಿ ಯಂದು ಮಂಗಳಾದೇವಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಸ್.ಪ್ರದೀಪ ಕುಮಾರ್ ಕಲ್ಕೂರ ಕವಿಗೋಷ್ಠಿಯನ್ನು ಉದ್ಘಾಟಿಸುವರು.

ಕವಿ – ಸಾಹಿತಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ 10 ಮಂದಿ ಪ್ರಮುಖ ಕವಿಗಳು ಭಾಗವಹಿಸಲಿದ್ದು, 10 ಜನ ಕವಿಗಳಲ್ಲಿ ಬೆಳ್ತಂಗಡಿ ತಾಲೂಕಿನಿಂದ ವಸಂತಿ ಟಿ ನಿಡ್ಲೆ ಓರ್ವರಾಗಿರುತ್ತಾರೆ. ಬಹುಮುಖ ಪ್ರತಿಭಾ ಸಂಪನ್ನೆಯಾಗಿರುವ ಇವರು ವೃತ್ತಿಯಲ್ಲಿ ಶಿಕ್ಷಕಿ. ಪ್ರವೃತ್ತಿ ಯಲ್ಲಿ ಕವಯತ್ರಿ, ಲೇಖಕಿ, ಯಕ್ಷಗಾನ ಕಲಾವಿದೆ.ಹಲವಾರು ಸಾಹಿತ್ಯ ಸಮ್ಮೇಳನ ಗಳಲ್ಲಿ ಸಂಪನ್ಮೂಲ ವ್ಯಕ್ತಿ ಯಾಗಿ ಭಾಗವಹಿಸಿರುವ ಇವರು 2024ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿ, ಒಟ್ಟು 1 ರಾಷ್ಟ್ರ ಪ್ರಶಸ್ತಿ, 8 ರಾಜ್ಯ ಪ್ರಶಸ್ತಿ, 1 ಜಿಲ್ಲಾ ಪ್ರಶಸ್ತಿ 2 ತಾಲೂಕು ಮಟ್ಟದ ಪ್ರಶಸ್ತಿ. ಹೀಗೆ 12 ಪ್ರಶಸ್ತಿ ಗಳನ್ನು ಮುಡಿಗೇರಿ ಸಿಕೊಂಡ ಅಪ್ರತಿಮ ಸಾಧಕಿ ಎಂಬ ಹೆಗ್ಗಳಿಕೆಗೆ ಪಾತ್ರ ರಾಗಿದ್ದಾರೆ.

Related posts

ಎಸ್‌.ಡಿ‌.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

Suddi Udaya

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ʼಎಮ್ಯುಲೇಶನ್‌ʼ ಕಾರ್ಯಕ್ರಮ

Suddi Udaya
error: Content is protected !!