38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ಮಡಂತ್ಯಾರು : 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಕ್ಷೀರ ಗಂಗಾ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಕೇಶವ ಪೂಜಾರಿ ಪಿ.ನಾಳ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಸಂಘವು ಲಾಭ ಗಳಿಸಲು ಸಂಘದ ಸದಸ್ಯರು ಉತ್ತಮ ಗುಣಮಟ್ಟದ ಹಾಲು ಪೂರೈಕೆ ಮಾಡಿರುವುದರಿಂದ ರೂ. 53837821.70 ವ್ಯವಹಾರ ನಡೆಸಿ, ವರದಿ ಸಾಲಿನಲ್ಲಿ ರೂ. 2,22,174.98 ಲಾಭ ಗಳಿಸಿದೆ. ಅದುದರಿಂದ ಸದಸ್ಯರಿಗೆ ಶೇ. 6 ಡಿವಿಡೆಂಡ್ ಘೋಷಣೆ ಮಾಡಿದರು.


ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯದರ್ಶಿ ಸೌಮ್ಯ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. ದ.ಕ.ಹಾಲು ಒಕ್ಕೂಟ ಮಾಜಿ ನಿರ್ದೇಶಕ ಪದ್ಮನಾಭ ಅರ್ಕಜೆ, ವರ್ಗಾವಣೆ ಹೊಂದಿರುವ ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ನಾಳ ಹಾಲು ಉತ್ಪಾದಕರ ಸಂಘದ ಮಾಜಿ ಅಧ್ಯಕ್ಷ ಸುಧಾಕರ ಮಜಲು, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅವರನ್ನು ಮತ್ತು ಸಂಘದ ಸದಸ್ಯರ ಮಕ್ಕಳು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಿದರು.

ಸಂಘದ ನಿರ್ದೇಶಕರಾದ ಸುಧಾಕರ ಮಜಲು, ಬಾಲಕೃಷ್ಣ ಶೆಟ್ಟಿ, ವಿಠ್ಠಲ ಗೌಡ, ಬೊಮ್ಮಣ್ಣ ಗೌಡ, ಶ್ರೀಧರ ಪೂಜಾರಿ, ರಮೇಶ್‌ ಶೆಟ್ಟಿ, ಜಗದೀಶ, ರೇಖಾ, ರೀತಾ ಕೆ., ವಿಜಯ, ಲೀಲಾವತಿ ಹಾಗೂ ಸಂಘದ ಸದಸ್ಯರು ಮತ್ತಿತರರಿದ್ದರು.

Related posts

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

Suddi Udaya

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

Suddi Udaya

ಲೇಖಕಿ ಪದ್ಮಲತಾ ಮೋಹನ್ ನಿಡ್ಲೆರವರ ಎಲ್ ಬಿಡಬ್ಲೂ ಮತ್ತು ವಿದ್ಯಾಸಾರಥಿ ಮತ್ತು ಮನೋಸಾರಥಿ ಪುಸ್ತಕ ಬಿಡುಗಡೆ

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಬಳಂಜ : ಸರ್ವೋದಯ ಫ್ರೆಂಡ್ಸ್ ಹಾಗೂ ಅಟ್ಲಾಜೆ ಸ.ಕಿ.ಪ್ರಾ. ಶಾಲೆಯ ಸಹಭಾಗಿತ್ವದಲ್ಲಿ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!