July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ಮಡಂತ್ಯಾರು : 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಕ್ಷೀರ ಗಂಗಾ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಕೇಶವ ಪೂಜಾರಿ ಪಿ.ನಾಳ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಸಂಘವು ಲಾಭ ಗಳಿಸಲು ಸಂಘದ ಸದಸ್ಯರು ಉತ್ತಮ ಗುಣಮಟ್ಟದ ಹಾಲು ಪೂರೈಕೆ ಮಾಡಿರುವುದರಿಂದ ರೂ. 53837821.70 ವ್ಯವಹಾರ ನಡೆಸಿ, ವರದಿ ಸಾಲಿನಲ್ಲಿ ರೂ. 2,22,174.98 ಲಾಭ ಗಳಿಸಿದೆ. ಅದುದರಿಂದ ಸದಸ್ಯರಿಗೆ ಶೇ. 6 ಡಿವಿಡೆಂಡ್ ಘೋಷಣೆ ಮಾಡಿದರು.


ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯದರ್ಶಿ ಸೌಮ್ಯ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. ದ.ಕ.ಹಾಲು ಒಕ್ಕೂಟ ಮಾಜಿ ನಿರ್ದೇಶಕ ಪದ್ಮನಾಭ ಅರ್ಕಜೆ, ವರ್ಗಾವಣೆ ಹೊಂದಿರುವ ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ನಾಳ ಹಾಲು ಉತ್ಪಾದಕರ ಸಂಘದ ಮಾಜಿ ಅಧ್ಯಕ್ಷ ಸುಧಾಕರ ಮಜಲು, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅವರನ್ನು ಮತ್ತು ಸಂಘದ ಸದಸ್ಯರ ಮಕ್ಕಳು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಿದರು.

ಸಂಘದ ನಿರ್ದೇಶಕರಾದ ಸುಧಾಕರ ಮಜಲು, ಬಾಲಕೃಷ್ಣ ಶೆಟ್ಟಿ, ವಿಠ್ಠಲ ಗೌಡ, ಬೊಮ್ಮಣ್ಣ ಗೌಡ, ಶ್ರೀಧರ ಪೂಜಾರಿ, ರಮೇಶ್‌ ಶೆಟ್ಟಿ, ಜಗದೀಶ, ರೇಖಾ, ರೀತಾ ಕೆ., ವಿಜಯ, ಲೀಲಾವತಿ ಹಾಗೂ ಸಂಘದ ಸದಸ್ಯರು ಮತ್ತಿತರರಿದ್ದರು.

Related posts

ಜಿಲ್ಲಾ ಮಟ್ಟದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಯಂಗ್ ಚಾಲೆಂಜರ್ಸ್ ತಂಡ ದ್ವಿತೀಯ

Suddi Udaya

ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸರ್ ಮಿರ್ಜಾ ಇಸ್ಮಾಯಿಲ್ ರವರ 138 ನೇ ಜನ್ಮ ದಿನಾಚರಣೆ’

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya
error: Content is protected !!