July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

ಗುರುವಾಯನಕೆರೆ: ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗುರುನಮನ ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಗಳು ಅನೇಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸಾಂಸ್ಕೃತಿಕ ಹಬ್ಬದ ವಾತಾವರಣವನ್ನು ಸೃಷ್ಟಿಸಿದರು.


ಸಂಸ್ಕೃತ ಭಾಷಾ ಉಪನ್ಯಾಸಕರಾದ ರಘು ಬಿಜೂರು ಅವರು ತಮ್ಮ ತಂಡದ ವತಿಯಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಅನೇಕ ಉಪನ್ಯಾಸಕರು ತಂಡಗಳಾಗಿ ವೈವಿದ್ಯಮಯ ಕಾರ್ಯಕ್ರಮಗಳ ಜೊತೆಗೆ ಇಂಪಾದ ಹಾಡುಗಳನ್ನು ಹಾಡುವ ಮೂಲಕ ವಿದ್ಯಾರ್ಥಿ, ಪೋಷಕರ ಮನರಂಜಿಸಿದರು. ವಿನೂತನ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿದ್ದ ಈ ಸಾಂಸ್ಕೃತಿಕ ಹಬ್ಬದಲ್ಲಿ ನಿಲಯ ಪಾಲಕರು ಮತ್ತು ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದು ಗಮನ ಸೆಳೆಯಿತು.


ಈ ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಉಪನ್ಯಾಸಕ ವರ್ಗದವರೇ ಸೇರಿಕೊಂಡು ಶ್ರೀ ದೇವಿ ಮಹಾತ್ಮೆ– ಮಹಿಷ ಮರ್ದಿನಿ ಎನ್ನುವ ಯಕ್ಷಗಾನ ಪ್ರಸಂಗವನ್ನು ನಡೆಸಿಕೊಟ್ಟರು. ಭಾಗವತರಾಗಿ ರಸಾಯನ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಈಶ್ವರ ಶರ್ಮ, ಮದ್ದಳೆಯಲ್ಲಿಸಂಸ್ಕೃತ ವಿಭಾಗದ ವೆಂಕಟೇಶ್, ಚೆಂಡೆಯಲ್ಲಿ ವಿದ್ಯಾರ್ಥಿ ಅತುಲ್ ಕೃಷ್ಣ ಸಹಕರಿದರು. ದೇವೇಂದ್ರನಾಗಿ ಕನ್ನಡ ವಿಭಾಗದ ಮುಖ್ಯಸ್ಥರಾದ ಜಯರಾಮ್, ದೇವ ಬಲಗಳಾಗಿ ಕನ್ನಡ ವಿಭಾಗದ ಚರಣ್ ಮತ್ತು ಕಚೇರಿ ಸಹಾಯಕರಾದ ಜಯಪ್ರಕಾಶ್, ಮಹಿಷಾಸುರನಾಗಿ ಗಣಕ ವಿಜ್ಞಾನ ವಿಭಾಗದ ವಿನಯ್ , ಬಣ್ಣದ ಬಲಗಳಾಗಿ ಆಡಳಿತಾಧಿಕಾರಿ ಕೀರ್ತಿನಿಧಿ ಜೈನ್, ರಸಾಯನ ವಿಜ್ಞಾನ ವಿಭಾಗದ ಶಿವರಾಜ್, ನಿಲಯ ಪಾಲಕರಾದ ಸುನಿಲ್ ,ಬ್ರಹ್ಮನಾಗಿ ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್,ವಿಷ್ಣು ಮತ್ತು ಮಾಲಿನಿ ದೂತನಾಗಿ ಜೀವ ವಿಜ್ಞಾನ ವಿಭಾಗದ ಪ್ರಜ್ವಿತ್ ರೈ,ಈಶ್ವರನಾಗಿ ರಸಾಯನ ವಿಜ್ಞಾನ ವಿಭಾಗದ ಪ್ರದೀಪ್ ನಾಗ್, ಮಾಲಿನಿಯಾಗಿ ಆಪ್ತ ಸಮಾಲೋಚನಾ ವಿಭಾಗದ ದುರ್ಗಾ ಪರಮೇಶ್ವರ, ಸುಪಾರ್ಶ್ವ ಮುನಿಯಾಗಿ ಕನ್ನಡ ವಿಭಾಗದ ಸಂಜೀವ್, ಸಿಂಹನಾಗಿ ಕಚೇರಿ ಸಹಾಯಕರಾದ ಗಣೇಶ ,ಶ್ರೀದೇವಿಯಾಗಿ ಶೈಕ್ಷಣಿಕ ಸಂಯೋಜಕರಾದ ನಿಶಾ ಪೂಜಾರಿ ಭಾಗವಹಿಸಿದ್ದರು.

ಉಪನ್ಯಾಸಕರು ತಮ್ಮ ಪಾತ್ರಗಳನ್ನು ಅತ್ಯಂತ ಸೊಗಸಾಗಿ ಅಭಿನಯಿಸಿದರು . ರಾಜ್ಯದ ವಿವಿಧ ಮೂಲೆಗಳಿಂದ ಬಂದಿದ್ದ ಅನೇಕ ಪೋಷಕರು ಎಕ್ಸೆಲ್ ಸಾಂಸ್ಕೃತಿಕ ವೈಭವವನ್ನು ಮನ ತುಂಬಿಕೊಂಡಿದ್ದಲ್ಲದೆ ಸಂತಸವನ್ನು ವ್ಯಕ್ತಪಡಿಸಿದರು. ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ, ಡಾ.ಪ್ರಜ್ವಲ್ ಕಜೆ, ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

Related posts

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

Suddi Udaya

ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದ ದುರ್ಘಟನೆ ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಎಂಬವರು ಮೃತ್ಯು

Suddi Udaya

ಮುಗ್ಗ ಗುತ್ತಿನಲ್ಲಿ ನವರಾತ್ರಿ ಪೂಜೆ ಆರಂಭ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಫೆ.12-16: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವ

Suddi Udaya
error: Content is protected !!