March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ. ಎಂ ಮಹಿಳಾ ಐ.ಟಿ.ಐ ಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೆ. 30 ರಂದು ಆಯುಧ ಪೂಜೆಯನ್ನು ವಿಧಿವತ್ತಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಶ್ರೀಮತಿ ಅನಿತಾ ಸುರೇಂದ್ರ ಕುಮಾರ್ ಹಾಗೂ ಶ್ರೀಮತಿ ಮೈತ್ರಿ ಇವರು ಆಗಮಿಸಿ ಪೂಜಾ ವಿಧಿಗಳಿಗೆ ನೇತೃತ್ವ ವಹಿಸಿ ವಿದ್ಯಾರ್ಥಿನಿಯರನ್ನು ಆಶೀರ್ವದಿಸಿದರು.

ದಸರಾ ಹಬ್ಬದ ಒಂಬನೇ ದಿನದಲ್ಲಿ ಆಚರಿಸುವ ಹಬ್ಬ ಆಯುಧ ಪೂಜೆ. ಶ್ರಮಕ್ಕೆ ಗೌರವ, ಶ್ರಮದ ಪಾವಿತ್ರ್ಯತೆ, ಸಂಪ್ರದಾಯದ ಮೌಲ್ಯ, ಒಗ್ಗಟ್ಟು, ಆಧ್ಯಾತ್ಮಿಕತೆ ಈ ಎಲ್ಲಾ ವಿಚಾರಗಳನ್ನ ಮನದಲ್ಲಿಟ್ಟುಕೊಂಡು, ವಿದ್ಯಾರ್ಥಿಗಳು ತಮ್ಮ ಲ್ಯಾಬ್‌ಗಳನ್ನು ಸ್ವಚ್ಛಗೊಳಿಸಿ ಅಲಂಕರಿಸಿ, ಉಪಕರಣಗಳಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಕೂಡಾ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂಪ್ರದಾಯಕ್ಕೆ ಗೌರವ ಸಲ್ಲಿಸಿದರು.

ಪ್ರತೀ ವರುಷ ಆಯುಧ ಪೂಜೆ ಮಾಡುವುದರಿಂದ ನಾವು ಉಪಯೋಗಿಸುವ ಆಯುಧ, ಮೆಷಿನರಿಗಳಿಂದ ಯಾವುದೇ ತೊಂದರೆಗಳು ಆಗಬಾರದು ಹಾಗೂ ಕಲಿತ ವಿದ್ಯೆ ಸಂಪೂರ್ಣವಾಗಿ ಉಪಯೋಗ ಆಗಬೇಕು ಎಂದು ಆಯುಧ ಪೂಜೆ ಹಾಗೂ ಶಾರದಾ ಪೂಜೆಯನ್ನು ಭಕ್ತಿಯಿಂದ ಆಚರಿಸಲಾಗುವುದು.

ಪ್ರಾಂಶುಪಾಲರಾದ ವಿ. ಪ್ರಕಾಶ್ ಕಾಮತ್, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಈ ಕಾರ್ಯದಲ್ಲಿ ಭಾಗಿಯಾಗಿದ್ದರು.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ಬಂಗೇರ‌ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಹರಿದು ಬಂದ ಜನ ಸಾಗರ: ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ: ಹುಟ್ಟೂರು ಕೇದೆಯಲ್ಲಿ ಅಂತ್ಯಸಂಸ್ಕಾರ

Suddi Udaya

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya
error: Content is protected !!