September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ. ಎಂ ಮಹಿಳಾ ಐ.ಟಿ.ಐ ಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೆ. 30 ರಂದು ಆಯುಧ ಪೂಜೆಯನ್ನು ವಿಧಿವತ್ತಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಶ್ರೀಮತಿ ಅನಿತಾ ಸುರೇಂದ್ರ ಕುಮಾರ್ ಹಾಗೂ ಶ್ರೀಮತಿ ಮೈತ್ರಿ ಇವರು ಆಗಮಿಸಿ ಪೂಜಾ ವಿಧಿಗಳಿಗೆ ನೇತೃತ್ವ ವಹಿಸಿ ವಿದ್ಯಾರ್ಥಿನಿಯರನ್ನು ಆಶೀರ್ವದಿಸಿದರು.

ದಸರಾ ಹಬ್ಬದ ಒಂಬನೇ ದಿನದಲ್ಲಿ ಆಚರಿಸುವ ಹಬ್ಬ ಆಯುಧ ಪೂಜೆ. ಶ್ರಮಕ್ಕೆ ಗೌರವ, ಶ್ರಮದ ಪಾವಿತ್ರ್ಯತೆ, ಸಂಪ್ರದಾಯದ ಮೌಲ್ಯ, ಒಗ್ಗಟ್ಟು, ಆಧ್ಯಾತ್ಮಿಕತೆ ಈ ಎಲ್ಲಾ ವಿಚಾರಗಳನ್ನ ಮನದಲ್ಲಿಟ್ಟುಕೊಂಡು, ವಿದ್ಯಾರ್ಥಿಗಳು ತಮ್ಮ ಲ್ಯಾಬ್‌ಗಳನ್ನು ಸ್ವಚ್ಛಗೊಳಿಸಿ ಅಲಂಕರಿಸಿ, ಉಪಕರಣಗಳಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಕೂಡಾ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂಪ್ರದಾಯಕ್ಕೆ ಗೌರವ ಸಲ್ಲಿಸಿದರು.

ಪ್ರತೀ ವರುಷ ಆಯುಧ ಪೂಜೆ ಮಾಡುವುದರಿಂದ ನಾವು ಉಪಯೋಗಿಸುವ ಆಯುಧ, ಮೆಷಿನರಿಗಳಿಂದ ಯಾವುದೇ ತೊಂದರೆಗಳು ಆಗಬಾರದು ಹಾಗೂ ಕಲಿತ ವಿದ್ಯೆ ಸಂಪೂರ್ಣವಾಗಿ ಉಪಯೋಗ ಆಗಬೇಕು ಎಂದು ಆಯುಧ ಪೂಜೆ ಹಾಗೂ ಶಾರದಾ ಪೂಜೆಯನ್ನು ಭಕ್ತಿಯಿಂದ ಆಚರಿಸಲಾಗುವುದು.

ಪ್ರಾಂಶುಪಾಲರಾದ ವಿ. ಪ್ರಕಾಶ್ ಕಾಮತ್, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಈ ಕಾರ್ಯದಲ್ಲಿ ಭಾಗಿಯಾಗಿದ್ದರು.

Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವದೇಶಿ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya
error: Content is protected !!