22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ. ಎಂ ಮಹಿಳಾ ಐ.ಟಿ.ಐ ಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೆ. 30 ರಂದು ಆಯುಧ ಪೂಜೆಯನ್ನು ವಿಧಿವತ್ತಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಶ್ರೀಮತಿ ಅನಿತಾ ಸುರೇಂದ್ರ ಕುಮಾರ್ ಹಾಗೂ ಶ್ರೀಮತಿ ಮೈತ್ರಿ ಇವರು ಆಗಮಿಸಿ ಪೂಜಾ ವಿಧಿಗಳಿಗೆ ನೇತೃತ್ವ ವಹಿಸಿ ವಿದ್ಯಾರ್ಥಿನಿಯರನ್ನು ಆಶೀರ್ವದಿಸಿದರು.

ದಸರಾ ಹಬ್ಬದ ಒಂಬನೇ ದಿನದಲ್ಲಿ ಆಚರಿಸುವ ಹಬ್ಬ ಆಯುಧ ಪೂಜೆ. ಶ್ರಮಕ್ಕೆ ಗೌರವ, ಶ್ರಮದ ಪಾವಿತ್ರ್ಯತೆ, ಸಂಪ್ರದಾಯದ ಮೌಲ್ಯ, ಒಗ್ಗಟ್ಟು, ಆಧ್ಯಾತ್ಮಿಕತೆ ಈ ಎಲ್ಲಾ ವಿಚಾರಗಳನ್ನ ಮನದಲ್ಲಿಟ್ಟುಕೊಂಡು, ವಿದ್ಯಾರ್ಥಿಗಳು ತಮ್ಮ ಲ್ಯಾಬ್‌ಗಳನ್ನು ಸ್ವಚ್ಛಗೊಳಿಸಿ ಅಲಂಕರಿಸಿ, ಉಪಕರಣಗಳಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಕೂಡಾ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂಪ್ರದಾಯಕ್ಕೆ ಗೌರವ ಸಲ್ಲಿಸಿದರು.

ಪ್ರತೀ ವರುಷ ಆಯುಧ ಪೂಜೆ ಮಾಡುವುದರಿಂದ ನಾವು ಉಪಯೋಗಿಸುವ ಆಯುಧ, ಮೆಷಿನರಿಗಳಿಂದ ಯಾವುದೇ ತೊಂದರೆಗಳು ಆಗಬಾರದು ಹಾಗೂ ಕಲಿತ ವಿದ್ಯೆ ಸಂಪೂರ್ಣವಾಗಿ ಉಪಯೋಗ ಆಗಬೇಕು ಎಂದು ಆಯುಧ ಪೂಜೆ ಹಾಗೂ ಶಾರದಾ ಪೂಜೆಯನ್ನು ಭಕ್ತಿಯಿಂದ ಆಚರಿಸಲಾಗುವುದು.

ಪ್ರಾಂಶುಪಾಲರಾದ ವಿ. ಪ್ರಕಾಶ್ ಕಾಮತ್, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಈ ಕಾರ್ಯದಲ್ಲಿ ಭಾಗಿಯಾಗಿದ್ದರು.

Related posts

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಧರ್ಮಸ್ಥಳ :ಶ್ರೀ ಧ .ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ ತರಗತಿ ಆರಂಭ

Suddi Udaya

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ ರೋಟರಿ ಭವನದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ

Suddi Udaya
error: Content is protected !!