23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

ಬೆಳ್ತಂಗಡಿ : ಲಾಡ್ಜ್ ನಲ್ಲಿ ರೂಂ ಮಾಡಿದ್ದ ದಂಪತಿಗಳು ಕಳೆದುಕೊಂಡಿದ್ದ ಚಿನ್ನವನ್ನು ಲಾಡ್ಜ್ ಸಿಬ್ಬಂದಿ ಹುಡುಕಿ ಮತ್ತೆ ವಾರಿಸುದಾರರಿಗೆ ಮರಳಿಸಿ ಮಾನವೀಯತೆ ಮೆರೆದಿದ್ದಾರೆ.

ಧರ್ಮಸ್ಥಳ ಗ್ರಾಮದ ನೇತ್ರಾವತಿಯಲ್ಲಿರುವ ಅಖಿಲ್ ಶೆಟ್ಟಿ ಮಾಲೀಕತ್ವದ ಪಾರಿಜಾತ ಹೆಸರಿನ ಲಾಡ್ಜ್ ಗೆ ಸೆ.29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯಕ್ಕೆ ಹೋಗಲು ಆಂಧ್ರಪ್ರದೇಶ ಮೂಲದ ಶಿವಕುಮಾರ್ ಮತ್ತು ಆತನ ಪತ್ನಿ ರೂಂ ಮಾಡಿದ್ದರು. ಆದ್ರೆ ಸೆ.30 ರಂದು ರೂಂ ಚೆಕ್ ಓಟ್ ಮಾಡುವಾಗ ಪತ್ನಿಯ 20 ಗ್ರಾಂ ತೂಕದ ಚಿನ್ನವನ್ನು ರೂಂ ನಲ್ಲಿ ಕಳೆದುಕೊಂಡಿದ್ದಾರೆ. ಯಾವ ಕಡೆ ಹುಡುಕಾಟ ನಡೆಸಿದ್ರೂ ಚಿನ್ನ ಪತ್ತೆಯಾಗಿರಲಿಲ್ಲ ಕೊನೆಗೆ ಚಿನ್ನವನ್ನು ಹುಡುಕಿ ವಾಪಸ್ ಕೊಡುವ ಜವಾಬ್ದಾರಿ ನಮ್ಮದು ಎಂದು ಲಾಡ್ಜ್ ಮಾಲೀಕ ಅಖಿಲ್ ಶೆಟ್ಟಿ ದಂಪತಿಗಳಿಗೆ ಭರವಸೆ ನೀಡಿ ಕಳುಹಿಸಿದ್ದರು.

ದಂಪತಿಗಳು ತಂಗಿದ್ದ ರೂಂ ಸಿಬ್ಬಂದಿಗಳು ಎಲ್ಲಾ ಕಡೆ ಹುಡುಕಾಟ ಮಾಡಿದ್ದರೂ ಪತ್ತೆಯಾಗದಿದ್ದಾಗ ಕೊನೆಗೆ ಯಾರಿಗೂ ರೂಂ ನೀಡದೆ ಲಾಕ್ ಮಾಡಿ ಇಟ್ಟಿದ್ದರು. ದಂಪತಿಗಳು ಉಪಯೋಗಿಸಿದ್ದ ಬೆಡ್ ಶೀಟ್ ಮತ್ತು ದಿಂಬು ಕವರ್ ಗಳನ್ನು ವಾಶ್ ಮಾಡಲು ಕಳುಹಿಸಿದ್ದರು. ಅ.1 ರಂದು ವಾಶ್ ಮಾಡಲು ಕಳುಹಿಸಿದ್ದ ದಿಂಬು ಕವರ್ ಒಳಗೆ ಚಿನ್ನ ಇರುವುದನ್ನು ಸಿಬ್ಬಂದಿಗಳು ಪತ್ತೆ ಮಾಡಿದ್ದಾರೆ. ತಕ್ಷಣ ಕರೆಮಾಡಿ ದಂಪತಿಗಳನ್ನು ಲಾಡ್ಜ್ ಗೆ ಕರೆಸಿ ವಿಚಾರ ಹೇಳಿದಾಗ ರಾತ್ರಿ ಮಲಗುವಾಗ ಚಿನ್ನವನ್ನು ದಿಂಬು ಪಕ್ಕ ಇಟ್ಟಿದ್ದು ಅದು ದಿಂಬು ಕವರ್ ಒಳಗಡೆ ಸೇರಿದೆ ಎಂದಿದ್ದಾರೆ.

ಕೊನೆಗೂ ಸುಮಾರು 2 ಲಕ್ಷ ಮೌಲ್ಯದ 20 ಗ್ರಾಂ ಚಿನ್ನವನ್ನು ಕಳೆದುಕೊಂಡಿದ್ದ ಆಂದ್ರಪ್ರದೇಶದ ದಂಪತಿಗಳಿಗೆ ಚಿನ್ನವನ್ನು ಮರಳಿ ಹಸ್ತಾಂತರಿಸಿ ಪಾರಿಜಾತ ಇನ್ ಲಾಡ್ಜ್ ಮಾಲೀಕ ಅಖಿಲ್ ಶೆಟ್ಟಿ ಮತ್ತು ವೀಕ್ಷಿತ್ ಶೆಟ್ಟಿ ಮಾನವೀಯತೆ ಮೆರೆದಿದ್ದಾರೆ.

Related posts

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya
error: Content is protected !!