September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

ವಂಶಪಾರಂಪರ್ಯ ಆಯುರ್ವೇದ ಪಂಡಿತ, ನಾಡಿ ತಜ್ಞ, ‘ ಕರ್ನಾಟಕ ವೈದ್ಯರತ್ನ’ ಪ್ರಶಸ್ತಿ ಪುರಸ್ಕೃತ ಡಾ| ಸಲೀಂ ಗರ್ಡಾಡಿ ಅವರಿಗೆ ‘ ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ‘ ಲಭಿಸಿದೆ.

ಶಿವಮೊಗ್ಗ ಜಿಲ್ಲಾ ಪಂಚಾಯತ್, ಶಿಕಾರಿಪುರ ತಾಲೂಕು ಪಂಚಾಯತ್, ಗೊದ್ದನಕೊಪ್ಪ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಮಿತಿಗಳ ಆಶ್ರಯದಲ್ಲಿ ಶಿವಮೊಗ್ಗದಲ್ಲಿ ನಡೆದ ‘ಜಾನಪದ ಯುವಜನೋತ್ಸವ’ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಿತು.


ಮೂಡುಬಿದಿರೆ ಸಮೀಪದ ಗರ್ಡಾಡಿಯವರಾಗಿದ್ದು ಮೂಡುಬಿದಿರೆಯಲ್ಲಿ ಸಂಜೀವಿನಿ ಆಯುರ್ವೇದಿಕ್ ಸಂಸ್ಥೆಯನ್ನು ಹೊಂದಿರುವ ವೈದ್ಯ ಎಂ.ಕೆ.ಗರ್ಡಾಡಿ ಅವರ ಪುತ್ರರಾಗಿರುವ ಸಲೀಂ ಗರ್ಡಾಡಿ ಅವರು ಪ್ರಸ್ತುತ ಚಿಕ್ಕಮಗಳೂರಿನಲ್ಲಿ ಅಮೃತ ಸಂಜೀವಿನಿ ಆಯುರ್ವೇದಿಕ್ ಸಂಸ್ಥೆಯನ್ನು ಮುಂದುವರಿಸುತ್ತಿದ್ದಾರೆ.


ವಂಶಪಾರಂಪರ್ಯ ಆಯುರ್ವೇದ ಕ್ಷೇತ್ರದಲ್ಲಿ ಎಲೆಮರೆಕಾಯಿಯಂತೆ ಗಣನೀಯ ಸೇವೆ ಸಲ್ಲಿಸಿರುವ ಇವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

Related posts

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ಧರ್ಮಸ್ಥಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಶಿಕ್ಷಕಿ ಮಾಲತಿ ಶಿಶಿಲ ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya
error: Content is protected !!