July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

ವಂಶಪಾರಂಪರ್ಯ ಆಯುರ್ವೇದ ಪಂಡಿತ, ನಾಡಿ ತಜ್ಞ, ‘ ಕರ್ನಾಟಕ ವೈದ್ಯರತ್ನ’ ಪ್ರಶಸ್ತಿ ಪುರಸ್ಕೃತ ಡಾ| ಸಲೀಂ ಗರ್ಡಾಡಿ ಅವರಿಗೆ ‘ ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ‘ ಲಭಿಸಿದೆ.

ಶಿವಮೊಗ್ಗ ಜಿಲ್ಲಾ ಪಂಚಾಯತ್, ಶಿಕಾರಿಪುರ ತಾಲೂಕು ಪಂಚಾಯತ್, ಗೊದ್ದನಕೊಪ್ಪ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಮಿತಿಗಳ ಆಶ್ರಯದಲ್ಲಿ ಶಿವಮೊಗ್ಗದಲ್ಲಿ ನಡೆದ ‘ಜಾನಪದ ಯುವಜನೋತ್ಸವ’ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಿತು.


ಮೂಡುಬಿದಿರೆ ಸಮೀಪದ ಗರ್ಡಾಡಿಯವರಾಗಿದ್ದು ಮೂಡುಬಿದಿರೆಯಲ್ಲಿ ಸಂಜೀವಿನಿ ಆಯುರ್ವೇದಿಕ್ ಸಂಸ್ಥೆಯನ್ನು ಹೊಂದಿರುವ ವೈದ್ಯ ಎಂ.ಕೆ.ಗರ್ಡಾಡಿ ಅವರ ಪುತ್ರರಾಗಿರುವ ಸಲೀಂ ಗರ್ಡಾಡಿ ಅವರು ಪ್ರಸ್ತುತ ಚಿಕ್ಕಮಗಳೂರಿನಲ್ಲಿ ಅಮೃತ ಸಂಜೀವಿನಿ ಆಯುರ್ವೇದಿಕ್ ಸಂಸ್ಥೆಯನ್ನು ಮುಂದುವರಿಸುತ್ತಿದ್ದಾರೆ.


ವಂಶಪಾರಂಪರ್ಯ ಆಯುರ್ವೇದ ಕ್ಷೇತ್ರದಲ್ಲಿ ಎಲೆಮರೆಕಾಯಿಯಂತೆ ಗಣನೀಯ ಸೇವೆ ಸಲ್ಲಿಸಿರುವ ಇವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

Related posts

ಬೆಳ್ತಂಗಡಿ ತಾಲೂಕು ಹಾ.ಉ. ಕಾರ್ಯದರ್ಶಿಯವರ ವತಿಯಿಂದ ಗೌರವ ಡಾಕ್ಟರೇಟ್ ಅವಾರ್ಡ್ ಪುರಸ್ಕೃತೆ ಡಾ| ಸಾವಿತ್ರಿ ರೈ ಕೆ ರವರಿಗೆ ಸನ್ಮಾನ

Suddi Udaya

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya
error: Content is protected !!