September 6, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

ತೋಟತ್ತಾಡಿ : ಧರ್ಮರಕ್ಷಾ ವೇದಿಕೆ, ತೋಟತ್ತಾಡಿ ಇದರ ಆಶ್ರಯದಲ್ಲಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಸೆ 29 ರಂದು ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಯೋಗಂ SNDP ಶಾಖೆ, ಬೆಂದ್ರಾಳ ತೋಟತ್ತಾಡಿಯಲ್ಲಿ, ನಡೆಯಿತು.

ಬೆಳಿಗ್ಗೆ ವೇದಮೂರ್ತಿ ಶ್ರೀ ವಾದಿರಾಜ ಶಬರಾಯ ಉಜಿರೆ ಇವರ ಪೌರೋಹಿತ್ಯದಲ್ಲಿ,”ಗಣಹೋಮ ಹಾಗೂ ಶ್ರೀ ಶಾರದಾ ದೇವಿಯ ಮೂರ್ತಿ ಪ್ರತಿಷ್ಠೆ”.ನಂತರ ಆಹ್ವಾನಿತ ವಿವಿಧ ಭಜನಾ ತಂಡಗಳಿಂದ ಭಜನೆ, ನಂತರ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಕ್ಸೆಲ್ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರೊ| ಪ್ರಜ್ವಲ್ ಧಾರ್ಮಿಕ ಉಪನ್ಯಾಸ ನೀಡಿ ಮಾತನಾಡುತ್ತಾ ಧಾರ್ಮಿಕ ಆಚರಣೆಗಳು ಸನಾತನ ಸಂಸ್ಕೃತಿಯ ಪ್ರತೀಕ, ಮತ್ತು ನಾವು ದಿನನಿತ್ಯದ ಬದುಕಿನಲ್ಲಿ ಉತ್ತಮ ಜೀವನ ಮೌಲ್ಯಗಳನ್ನು ಮೈಗೂಡಿಸಿಕೊಂಡು,ನಾಗರಿಕ ಶಿಷ್ಟಾಚಾರಗಳನ್ನು ಪಾಲಿಸಬೇಕು ಎಂದರು‌.

ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡರು ಹಾಗೂ ಉದ್ಯಮಿಗಳಾದ ಕಿರಣ್ ಚಂದ್ರ ಪುಷ್ಪಗಿರಿ ಮಾತನಾಡಿ ಶಾರದಾ ಪೂಜೋತ್ಸವವು ಶ್ರೀ ಶಾರದಾ ದೇವಿಯು ವಿದ್ಯೆ,ಸಮೃದ್ಧಿಯ ಸಂಕೇತ, ನವರಾತ್ರಿ ಆಚರಣೆಯು ಯುವ ಸಮಾಜವನ್ನು ಸಂಘಟಿತರನ್ನಾಗಿ ಮಾಡುತ್ತದೆ ಎಂದರು.

ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ವಂದನಾ ಎಂ ಇರ್ವತ್ರಾಯ, ನವರಾತ್ರಿ ಆಚರಣೆಯ ಮಹತ್ವ ವಿವರಿಸಿದರು, ಕಾರ್ಯಕ್ರಮದಲ್ಲಿ ಚಾರ್ಮಾಡಿ ಗ್ರಾಂ ಪಂ ಅಧ್ಯಕ್ಷೆ ಶ್ರೀಮತಿ ಶಾರದಾ ಎ, ನಾರಾಯಣ ಗುರು ಎಸ್.ಎನ್.ಡಿ.ಪಿ ಸಂಘದ ಅಧ್ಯಕ್ಷ ಶ್ರೀ ಸುರೇಶ್ ಎಂ ಎನ್, ಧರ್ಮರಕ್ಷಾ ವೇದಿಕೆ, ತೋಟತ್ತಾಡಿ ಇದರ ಅಧ್ಯಕ್ಷರಾದ ಶ್ರೀ ಪ್ರಸಾದ್ ಮಡಿಯೂರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.


ಮದ್ಯಾಹ್ನ”ಮಹಾಪೂಜೆ ನಂತರ ಸಾರ್ವಜನಿಕ ಅನ್ನಸಂತರ್ಪಣೆ”ಮಧ್ಯಾಹ್ನ 2 ರಿಂದ ವಿವಿಧ ಆಹ್ವಾನಿತ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಸಂಜೆ ಮಹಾಪೂಜೆ ನಂತರ ಶ್ರೀ ಶಾರದಾ ದೇವಿ ಮೂರ್ತಿಯ ವೈಭವಯುತ ಶೋಭಾಯಾತ್ರೆ ನಡೆಯಿತು.

Related posts

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ನೂತನ ಕಚೇರಿ ಉದ್ಘಾಟನೆ : ಪತ್ರಕರ್ತರಿಗೆ, ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಹಾಗೂ ಸಾಧಕರಿಗೆ ಸನ್ಮಾನ – ಯಕ್ಷಗಾನ ಕಲಿಕಾ ತರಗತಿಗೆ ಚಾಲನೆ ಹಾಗೂ ಅಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ‘ಕವಿಗೋಷ್ಠಿ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya
error: Content is protected !!