25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ಮಡಂತ್ಯಾರು : 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಕ್ಷೀರ ಗಂಗಾ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಕೇಶವ ಪೂಜಾರಿ ಪಿ.ನಾಳ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಸಂಘವು ಲಾಭ ಗಳಿಸಲು ಸಂಘದ ಸದಸ್ಯರು ಉತ್ತಮ ಗುಣಮಟ್ಟದ ಹಾಲು ಪೂರೈಕೆ ಮಾಡಿರುವುದರಿಂದ ರೂ. 53837821.70 ವ್ಯವಹಾರ ನಡೆಸಿ, ವರದಿ ಸಾಲಿನಲ್ಲಿ ರೂ. 2,22,174.98 ಲಾಭ ಗಳಿಸಿದೆ. ಅದುದರಿಂದ ಸದಸ್ಯರಿಗೆ ಶೇ. 6 ಡಿವಿಡೆಂಡ್ ಘೋಷಣೆ ಮಾಡಿದರು.


ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯದರ್ಶಿ ಸೌಮ್ಯ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. ದ.ಕ.ಹಾಲು ಒಕ್ಕೂಟ ಮಾಜಿ ನಿರ್ದೇಶಕ ಪದ್ಮನಾಭ ಅರ್ಕಜೆ, ವರ್ಗಾವಣೆ ಹೊಂದಿರುವ ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ನಾಳ ಹಾಲು ಉತ್ಪಾದಕರ ಸಂಘದ ಮಾಜಿ ಅಧ್ಯಕ್ಷ ಸುಧಾಕರ ಮಜಲು, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅವರನ್ನು ಮತ್ತು ಸಂಘದ ಸದಸ್ಯರ ಮಕ್ಕಳು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಿದರು.

ಸಂಘದ ನಿರ್ದೇಶಕರಾದ ಸುಧಾಕರ ಮಜಲು, ಬಾಲಕೃಷ್ಣ ಶೆಟ್ಟಿ, ವಿಠ್ಠಲ ಗೌಡ, ಬೊಮ್ಮಣ್ಣ ಗೌಡ, ಶ್ರೀಧರ ಪೂಜಾರಿ, ರಮೇಶ್‌ ಶೆಟ್ಟಿ, ಜಗದೀಶ, ರೇಖಾ, ರೀತಾ ಕೆ., ವಿಜಯ, ಲೀಲಾವತಿ ಹಾಗೂ ಸಂಘದ ಸದಸ್ಯರು ಮತ್ತಿತರರಿದ್ದರು.

Related posts

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : ಬೃಹತ್ ರಕ್ತದಾನ ಶಿಬಿರ: ದಾಖಲೆಯ 180ಯುನಿಟ್ ರಕ್ತ ಸಂಗ್ರಹ

Suddi Udaya
error: Content is protected !!