25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎನ್ ಡಿ ಎ ಫಲಿತಾಂಶ : ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಮಹೋನ್ನತ ದಾಖಲೆ

ಗುರುವಾಯನಕೆರೆ: ರಾಷ್ಟ್ರ ಮಟ್ಟದಲ್ಲಿ ನಡೆಯುವ ಅತ್ಯಂತ ಕಠಿಣ ಪರೀಕ್ಷೆಯೆನಿಸಿಕೊಂಡ ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯ ಫೇಸ್ ಟೂ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸ ದಾಖಲೆ ನಿರ್ಮಿಸಿದ್ದಾರೆ.


ಎನ್ ಡಿ ಎ ಪರೀಕ್ಷೆ ಬರೆದ ಸಮ್ಯಕ್ ವಿಜಯ್, ಸ್ವಸ್ತಿಕ್ ಎಂ ಜೈನ್, ಅಕ್ಷಯ್ ಎ, ಯತಿನ್ ಬಿ ಎಸ್ , ಪ್ರಜ್ವಲ್ ಗೌಡ ಆರ್ ಎಸ್, ಶಶಾಂಕ್ ಗೌಡ ಆರ್, ಅಭಿಷೇಕ್ ಅಡಪ್ಪ, ಲಕ್ಷ ಮಹಾಜನ್, ತೇಜಲ್ ವಿ, ಅಮೃತ್ ನಾಯಕ್, ಶಮಿತ್ ಗೌಡ ಎ ಎಸ್ ಇವರು ಎನ್ ಡಿ ಎ ಎಕ್ಸಾಂ ಫೇಸ್ ಒನ್ ನ್ನು ಯಶಸ್ವಿಯಾಗಿ ಬರೆದು, ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ನಿರಂತರವಾಗಿ ದೊಡ್ಡ ಮೊತ್ತದ ಸ್ಟೈಫಂಡ್ ಸಿಗುವ , ಭಾರತೀಯ ಸೇನೆಯ ವಿವಿಧ ವಿಭಾಗಗಳಲ್ಲಿ ಉನ್ನತ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸುವ, ರಾಷ್ಟ್ರ ಮಟ್ಟದಲ್ಲಿ ಕೇವಲ 400 ಸೀಟ್ ಗಳಿರುವ ಈ ಪರೀಕ್ಷೆಗೆ ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಸ್ಪರ್ಧಿಸುತ್ತಾರೆ. ಲಕ್ಷಾಂತರ ವಿದ್ಯಾರ್ಥಿಗಳ ಕನಸಿನ ಆಯ್ಕೆ ಎನ್ ಡಿ ಎ ಆಗಿರುತ್ತದೆ. ಅತ್ಯುತ್ತಮ ಟೀಚಿಂಗ್ – ಕೋಚಿಂಗ್ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ಮಾತ್ರ ಎನ್ ಡಿ ಎ ಯನ್ನು ಕ್ಲಿಯರ್ ಮಾಡಲು ಸಾಧ್ಯ.

ಎಕ್ಸೆಲ್ ಕಾಲೇಜಿನ 11 ಜನ ವಿದ್ಯಾರ್ಥಿಗಳು ಒಂದೇ ಬಾರಿಗೆ ಎನ್ ಡಿ ಎ ಕ್ಲಿಯರ್ ಮಾಡಿರುವುದು ನಿಜಕ್ಕೂ ಅಲ್ಲಿನ ಗುಣಮಟ್ಟದ ಶಿಕ್ಷಣಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.
ವಿದ್ಯಾರ್ಥಿಗಳ ಸಾಧನೆಗೆ ಎಕ್ಸೆಲ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ,ಪ್ರಾಂಶುಪಾಲರು, ಪ್ರಾಧ್ಯಾಪಕರು,ಸಂಯೋಜಕರಾದ ಜೋಸ್ಟಮ್ ಎ ಟಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ

Suddi Udaya
error: Content is protected !!