30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ: ರಕ್ತದಾನ ಶಿಬಿರದ ಮೂಲಕ ಮಹಾತ್ಮ ಗಾಂಧಿಯವರ ಜನ್ಮದಿನ ಆಚರಣೆ

ಮಾಲಾಡಿ: ವಿದ್ಯಾರ್ಥಿಗಳು ಹಾಗೂ ಯುವಜನರು ರಕ್ತದಾನ ಮಾಡುವ ಮೂಲಕ ತಮ್ಮ ಜೀವನದಲ್ಲಿ ಇತರರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ತ್ಯಾಗ ಮನೋಭಾವನೆ ಬೆಳೆಸಿಕೊಳ್ಳಬೇಕು. ಮಹಾತ್ಮ ಗಾಂಧಿಯವರ ಜನ್ಮದಿನದಂದು ನಡೆಯುತ್ತಿರುವ ರಕ್ತದಾನ ಶಿಬಿರ ಅತ್ಯಂತ ಮಾದರಿ ಕಾರ್ಯಕ್ರಮ ಎಂದು ಮಾಲಾಡಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಧ್ಯಾಪಕಿ ಕುಸುಮಾವತಿ ಹೇಳಿದರು.

ಅವರು ಅ.1 ರಂದು ಮಾಲಾಡಿಯಲ್ಲಿ ಯುನೈಟೆಡ್ ಮಾಲಾಡಿ , ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ , ಬಿ.ಎಮ್ ಆಪೆ ರಿಕ್ಷಾ ಚಾಲಕ ಮಾಲಕರ ಸಂಘ ಮಡಂತ್ಯಾರು ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಮಾಲಾಡಿ ಎಸ್ ಕೆ ಹಾಲ್ ನಲ್ಲಿ ದೇಶದ ಸ್ವಾತಂತ್ರ್ಯ ಹೋರಾಟಗಾರ , ಅಹಿಂಸೆಯ ಪ್ರತಿಪಾದಕ ಮಹಾತ್ಮ ಗಾಂಧಿಯವರ ಜನ್ಮದಿನದ ಪ್ರಯುಕ್ತ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್. ಎಂ ಮಾತನಾಡಿ ಜೀವನದಲ್ಲಿ ಸಮಸ್ಯೆಗಳು ಬಂದಾಗ ಕೈಹಿಡಿದು ನಡೆಸಲು ರೆಡ್ ಕ್ರಾಸ್ ಸೊಸೈಟಿಯು ಸಮಾಜದಲ್ಲಿ ಸಂಕಷ್ಟಕ್ಕೊಳಗಾದ ಜನರಿಗೆ ಸರಕಾರಿ ಆಸ್ಪತ್ರೆಗಳಲ್ಲಿ ಬಿ.ಪಿ ಎಲ್ ಕಾರ್ಡ್ ದಾರರಿಗೆ ಉಚಿತವಾಗಿ ರಕ್ತನೀಡುವ ಮೂಲಕ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರಿನಲ್ಲಿ ಉತ್ತಮ ಸೇವೆ ನೀಡುತ್ತಿದೆ ಎಂದರು. ಸಮಾಜದಲ್ಲಿ ವ್ಯರ್ಥವಾಗಿ ರಕ್ತ ಹರಿಸುವವರ ನಡುವೆ ಇನ್ನೊಂದು ಜೀವದ ಉಳಿವಿಗಾಗಿ ರಕ್ತದಾನ ಮಾಡುವುದು ಅತ್ಯಂತ ಶ್ರೇಷ್ಠದಾನ. ಮಹಾತ್ಮ ಗಾಂಧಿಯವರ ಜನ್ಮದಿನದಂದು ಇನ್ನೊಂದು ಜೀವದ ಉಳಿವಿಗಾಗಿ ನಡೆಸುವ ರಕ್ತದಾನ ಶಿಬಿರ ನಡೆಸುವ ಮೂಲಕ ಮಹಾತ್ಮ ಗಾಂಧಿಯವರ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುನೈಟೆಡ್ ಮಾಲಾಡಿ ಅದ್ಯಕ್ಷ ಮಹಮ್ಮದ್ ಅಲಿ ವಹಿಸಿದ್ದರು. ವೇದಿಕೆಯಲ್ಲಿ ಬಿ.ಎಮ್ ಚಾಲಕ ಮಾಲಕರ ಸಂಘ ಮಡಂತ್ಯಾರು ಅದ್ಯಕ್ಷ ನಾಸೀರ್ ಬಂಗೇರುಕಟ್ಟೆ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್, ಸರ್ಕಾರಿ ಐಟಿಐ ಮಾಲಾಡಿ ಪ್ರಾಧ್ಯಾಪಕ ರವಿಚಂದ್ರ ಗೌಡ , ರೆಡ್ ಕ್ರಾಸ್ ಸೊಸೈಟಿಯ ಶ್ರೀಮತಿ ಮರಿಯಾ ಉಪಸ್ಥಿತರಿದ್ದರು .

ಯನೈಟೆಡ್ ಮಾಲಾಡಿ ಗೌರವಾಧ್ಯಕ್ಷ , ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯನ್ ಸ್ವಾಗತಿಸಿದರು. ರೆಡ್ ಕ್ರಾಸ್ ಸೊಸೈಟಿ ನಿರ್ದೇಶಕರಾದ ಶಿವಕುಮಾರ್ ಎಸ್. ಎಂ , ಸುಕನ್ಯಾ ಹೆಚ್ , ಹಿರಿಯರಾದ ಜೆರಾಲ್ಡ್ ಕೊರೆಯಾ , ನಿತ್ಯಾನಂದ ಹೆಗ್ಡೆ ,ಉದಯಚಂದ್ರ ವೀರೆಂದ್ರ ಕುಮಾರ್ , ವಿನ್ಸೆಂಟ್ ಡಿಸೋಜ ,ಯನೈಟೆಡ್ ಮಾಲಾಡಿಯ ಸದಸ್ಯರು ,ಬಿ.ಎಮ್ ಆಟೋ ಚಾಲಕ ಮಾಲಕ ಸಂಘದ ಸದಸ್ಯರು ಉಪಸ್ಥಿತರಿದ್ದು , ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

Suddi Udaya

ಸಾರಿಗೆ ನಿಯಮಗಳ ಉಲ್ಲಂಘನೆಯ ಪ್ರಕರಣಗಳು : ಡಿ.12 ರ ಒಳಗೆ ದಂಡ ಕಟ್ಟಿದಲ್ಲಿ ಶೇ 50 ರಿಯಾಯಿತಿ

Suddi Udaya

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ : ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ

Suddi Udaya

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

Suddi Udaya
error: Content is protected !!