July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ವತಿಯಿಂದ ಗ್ರಂಥಾಲಯಕ್ಕೆ ನೀಡಲಾದ ಪುಸ್ತಕಗಳು ಹಾಗೂ ಪೀಠೋಪಕರಣಗಳನ್ನು ಸ್ವೀಕರಿಸಿ ಅ.01ರಂದು ಉದ್ಘಾಟನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ಪಂಚಾಯತಿ ಅಧ್ಯಕ್ಷೆ ಸವಿತಾ ವಹಿಸಿದರು.
ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ಪ್ರಭಾಕರ ಆಚಾರ್ಯ , ವಿಜಯಲಕ್ಷ್ಮೀ., ಸ್ಥಳೀಯರಾದ ರಘುರಾಮ ಗಾಂಭೀರ, ಕೃಷ್ಣಪ್ಪ ಗೌಡ ಪ್ರಗತಿಪರ ಕೃಷಿಕರು, ದಯಾನಂದ ರೈ ಅಧ್ಯಕ್ಷರು ಶಾಲಾಡಳಿತ ಸಮಿತಿ, ಲಿಯೋ ಅಧ್ಯಕ್ಷೆ ಡಾ.ಭಾಷಿಣಿ, ಮುಖ್ಯೋಪಾಧ್ಯಾಯ ಜಿ ಮಂಜುನಾಥ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲಾಡಳಿತ ಸಮಿತಿಯ ಪದಾಧಿಕಾರಿಗಳು, ಶಾಲಾಭಿವೃದ್ಧಿ , ಸಮಿತಿಯ ಪದಾಧಿಕಾರಿಗಳು, ಶಾಲೆಯ ವಿದ್ಯಾರ್ಥಿಗಳು, ಮಕ್ಕಳ ಪೋಷಕರು, ಸವಣಾಲು ಫಲ್ಗುಣಿ ಮಹಿಳಾ ಭಜನಾ ಮಂಡಳಿಯ ಪದಾಧಿಕಾರಿಗಳು ,
ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮುಖ್ಯೋಪಾಧ್ಯಯರು ಸ್ವಾಗತಿಸಿದರು. ರಾಜೇಶ್ ಕೆ ಕಾರ್ಯಕ್ರಮ ನಿರೂಪಿಸಿದರು

Related posts

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಆರ್ಥಿಕ ಸಹಾಯ ಧನ ವಿತರಣೆ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಲ್ಮತ್ ಗೆ ಸಂಸ್ಕೃತದಲ್ಲಿ 99 ಅಂಕ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಸುಶ್ರುತ ಜಯಂತಿ ಅಂಗವಾಗಿ ಅಗ್ನಿಕರ್ಮ ನೋವು ನಿವಾರಕ ಕಾರ್ಯಾಗಾರ

Suddi Udaya

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya
error: Content is protected !!