25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಸೇವೆ

ಬೆಳ್ತಂಗಡಿ: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದ ಅಂಗವಾಗಿ ಯುವವಾಹಿನಿ ಬೆಳ್ತಂಗಡಿ ಘಟಕದ ಸದಸ್ಯರು ಅ.01 ರಂದು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿ ದೇವರ ಸೇವೆ ಮಾಡಿದರು.


ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ನೇತೃತ್ವದಲ್ಲಿ ಒಟ್ಟು 85 ಜನ ಯುವವಾಹಿನಿ ಸದಸ್ಯರು ಸ್ವಯಂ ಸೇವಕರಾಗಿ ಭಾಗವಹಿಸಿದರು. ಕ್ಷೇತ್ರದ ವತಿಯಿಂದ ಕೋಶಾಧಿಕಾರಿಗಳಾದ ಪದ್ಮರಾಜ್ ಆರ್ ಹಾಗೂ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ಘಟಕದ ಅಧ್ಯಕ್ಷರನ್ನು ಅನುಗ್ರಹ ಪತ್ರವನ್ನು ನೀಡಿ ಗೌರವಿಸಿದರು ಈ ಸಂದರ್ಭದಲ್ಲಿ ಘಟಕದಿಂದ ಅನ್ನದಾನಕ್ಕೆ ಸಹಾಯಧನವನ್ನು ಹಸ್ತಾಂತರಿಸಲಾಯಿತು.


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯುವನಾಯಕರಾದ ರಕ್ಷಿತ್ ಶಿವರಾಂ ರವರು ಇಡೀ ದಿನ ಘಟಕದೊಂದಿಗೆ ಸ್ವಯಂ ಸೇವೆಯಲ್ಲಿ ಭಾಗವಹಿಸಿದ್ದು ಮಾತ್ರವಲ್ಲದೆ ಬೆಳ್ತಂಗಡಿಯಿಂದ ಕುದ್ರೋಳಿಗೆ ತೆರಳಲು ಬಸ್ಸಿನ ವ್ಯವಸ್ಥೆಯನ್ನೂ ಮಾಡಿದರು.
ಘಟಕದ ಸದಸ್ಯರು ಕ್ಷೇತ್ರದಲ್ಲಿ ಸೇವಕೌಂಟರ್, ಪ್ರಸಾದ ಪ್ಯಾಕಿಂಗ್, ಅನ್ನಪ್ರಸಾದ ವಿತರಣೆಯಲ್ಲಿ ಸಹಕರಿಸಿದರು.
ಘಟಕದ ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಎಂಕೆ ಪ್ರಸಾದ್, ಸುಜಾತ ಅಣ್ಣಿ ಪೂಜಾರಿ, ಸದಾಶಿವ ಪೂಜಾರಿ ಊರ, ಮಹಿಳಾ ಸಂಚಾಲನ ಸಮಿತಿ ಪ್ರಧಾನ ಸಂಚಾಲಕಿ ಲೀಲಾವತಿ ಪನಕಜೆ, ಘಟಕದ ಉಪಾಧ್ಯಕ್ಷರಾದ ಸಂತೋಷ್ ಸಾಲಿಯಾನ್ ಅರಳಿ, ಕಾರ್ಯದರ್ಶಿ ಮಧುರ ರಾಘವ್, ಕೋಶಾಧಿಕಾರಿ ನಾಗೇಶ್ ಆದೆಲು, ಕಾರ್ಯಕ್ರಮ ಸಂಯೋಜಕರಾದ ರಾಘವೇಂದ್ರ ಮೇಲಂತಬೆಟ್ಟು, ಜಯಶ್ರೀ ಕಿಲ್ಲೂರು, ಶೈಲೇಶ್ ಹಾಗೂ ಘಟಕದ ಸದಸ್ಯರು ಭಾಗವಹಿಸಿದ್ದರು.

Related posts

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya
error: Content is protected !!