July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಸೇವೆ

ಬೆಳ್ತಂಗಡಿ: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದ ಅಂಗವಾಗಿ ಯುವವಾಹಿನಿ ಬೆಳ್ತಂಗಡಿ ಘಟಕದ ಸದಸ್ಯರು ಅ.01 ರಂದು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿ ದೇವರ ಸೇವೆ ಮಾಡಿದರು.


ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ನೇತೃತ್ವದಲ್ಲಿ ಒಟ್ಟು 85 ಜನ ಯುವವಾಹಿನಿ ಸದಸ್ಯರು ಸ್ವಯಂ ಸೇವಕರಾಗಿ ಭಾಗವಹಿಸಿದರು. ಕ್ಷೇತ್ರದ ವತಿಯಿಂದ ಕೋಶಾಧಿಕಾರಿಗಳಾದ ಪದ್ಮರಾಜ್ ಆರ್ ಹಾಗೂ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ಘಟಕದ ಅಧ್ಯಕ್ಷರನ್ನು ಅನುಗ್ರಹ ಪತ್ರವನ್ನು ನೀಡಿ ಗೌರವಿಸಿದರು ಈ ಸಂದರ್ಭದಲ್ಲಿ ಘಟಕದಿಂದ ಅನ್ನದಾನಕ್ಕೆ ಸಹಾಯಧನವನ್ನು ಹಸ್ತಾಂತರಿಸಲಾಯಿತು.


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯುವನಾಯಕರಾದ ರಕ್ಷಿತ್ ಶಿವರಾಂ ರವರು ಇಡೀ ದಿನ ಘಟಕದೊಂದಿಗೆ ಸ್ವಯಂ ಸೇವೆಯಲ್ಲಿ ಭಾಗವಹಿಸಿದ್ದು ಮಾತ್ರವಲ್ಲದೆ ಬೆಳ್ತಂಗಡಿಯಿಂದ ಕುದ್ರೋಳಿಗೆ ತೆರಳಲು ಬಸ್ಸಿನ ವ್ಯವಸ್ಥೆಯನ್ನೂ ಮಾಡಿದರು.
ಘಟಕದ ಸದಸ್ಯರು ಕ್ಷೇತ್ರದಲ್ಲಿ ಸೇವಕೌಂಟರ್, ಪ್ರಸಾದ ಪ್ಯಾಕಿಂಗ್, ಅನ್ನಪ್ರಸಾದ ವಿತರಣೆಯಲ್ಲಿ ಸಹಕರಿಸಿದರು.
ಘಟಕದ ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಎಂಕೆ ಪ್ರಸಾದ್, ಸುಜಾತ ಅಣ್ಣಿ ಪೂಜಾರಿ, ಸದಾಶಿವ ಪೂಜಾರಿ ಊರ, ಮಹಿಳಾ ಸಂಚಾಲನ ಸಮಿತಿ ಪ್ರಧಾನ ಸಂಚಾಲಕಿ ಲೀಲಾವತಿ ಪನಕಜೆ, ಘಟಕದ ಉಪಾಧ್ಯಕ್ಷರಾದ ಸಂತೋಷ್ ಸಾಲಿಯಾನ್ ಅರಳಿ, ಕಾರ್ಯದರ್ಶಿ ಮಧುರ ರಾಘವ್, ಕೋಶಾಧಿಕಾರಿ ನಾಗೇಶ್ ಆದೆಲು, ಕಾರ್ಯಕ್ರಮ ಸಂಯೋಜಕರಾದ ರಾಘವೇಂದ್ರ ಮೇಲಂತಬೆಟ್ಟು, ಜಯಶ್ರೀ ಕಿಲ್ಲೂರು, ಶೈಲೇಶ್ ಹಾಗೂ ಘಟಕದ ಸದಸ್ಯರು ಭಾಗವಹಿಸಿದ್ದರು.

Related posts

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

Suddi Udaya
error: Content is protected !!