ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿಯ ದಿನಾಚರಣೆಯನ್ನು ಅ.2 ರಂದು ರೋವರ್ಸ್ ಮತ್ತು ರೇಂಜರ್ಸ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವಿಶ್ವನಾಥ್ ಪಿ. ಅವರು ಮಹಾತ್ಮ ಗಾಂಧೀಜಿಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಗಾಂಧೀಜಿಯವರ ತತ್ವ ಸಿದ್ಧಾಂತಗಳು ಮತ್ತು ಅಹಿಂಸೆ ಹಾಗೂ ಸತ್ಯದ ಮಾರ್ಗಗಳನ್ನು ಇಡೀ ದೇಶಕ್ಕೆ ಪಸರಿಸಿದ ಒಬ್ಬ ಮಹಾನ್ ವ್ಯಕ್ತಿ ಎಂದು ಅಭಿಪ್ರಾಯಪಟ್ಟರು. ಹಾಗೆಯೇ ಈ ದಿನವನ್ನು ಅಂತರಾಷ್ಟ್ರೀಯ ಅಹಿಂಸ ದಿನ ಎಂದು ವಿಶ್ವ ಮಟ್ಟದಲ್ಲಿ ಆಚರಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ನ ಯೋಜನಾಧಿಕಾರಿಯಾದ ಡಾ. ಮಹೇಶ್ ಕುಮಾರ್ ಶೆಟ್ಟಿ .ಹೆಚ್ ಮತ್ತು ರೋವರ್ ಸ್ಕೌಟ್ ಲೀಡರ್ ಪ್ರಸಾದ್ ಕುಮಾರ್ ಅವರು ಹಾಗೂ ಎಲ್ಲಾ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕರು ಮತ್ತು ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಸಾದ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಮಹಾತ್ಮ ಗಾಂಧೀಜಿಯ 156ನೇ ಜನ್ಮದಿನದ ಸವಿ ನೆನಪಿಗಾಗಿ ಬೆಳ್ತಂಗಡಿ ತಾಲೂಕಿನ ಅನುಗ್ರಹ ಚಾರಿಟೇಬಲ್ ಟ್ರಸ್ಟ್ ನಡೆಸಲ್ಪಡುವ ವೃದ್ಧಾಶ್ರಮಕ್ಕೆ ಭೇಟಿ ನೀಡಿ ವೃದ್ಧರ ಕುಶಲೋಪರಿ ವಿಚಾರಿಸಿ ಹಣ್ಣು ಹಂಪಲುಗಳನ್ನು ಮತ್ತು ದಿನನಿತ್ಯ ಬಳಸಲಾಗುವ ವಸ್ತುಗಳನ್ನು ನೀಡಿ ಅವರಿಗೆ ಮನರಂಜನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Related posts

ಜನಪದ ಗೀತಾ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya

ಹಿಂದೂ ಸಂಗಮ ಆಯೋಜನಾ ಸಮಿತಿ ಬಳಂಜ ಮಂಡಲದಿಂದ “ಹಿಂದೂ ಸಂಗಮ” ಕಾರ್ಯಕ್ರಮ

Suddi Udaya

ಎನ್.ಸಿ.ಸಿ ರೈಫಲ್ ಫೈಯರಿಂಗ್ ಸ್ಪರ್ಧೆ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya
error: Content is protected !!