25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನಲ್ಲಿ ಗಾಂಧಿ ಜಯಂತಿ ಆಚರಣೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯ ಪ್ರಯುಕ್ತ, ಈ ಇಬ್ಬರು ರಾಷ್ಟ್ರ ನಾಯಕರ ಭಾವಚಿತ್ರದ ಮುಂದೆ ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆ ಮಾಡಲಾಯಿತು.

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ‘ ಈ ದೇಶ ಅಹಿಂಸಾ ಸಿದ್ಧಾಂತದಲ್ಲಿ ಸ್ವಾತಂತ್ರ್ಯ ಗಳಿಸುವಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹಾಗೂ ಸ್ವಾತ್ರಂತ್ರ್ಯ ಬಂದ ಬಳಿಕ ಅದನ್ನು ಉಳಿಸುವ ಹಾಗೂ ಸಮರ್ಥವಾಗಿ ದೇಶವನ್ನು ಮುನ್ನಡೆಸುವ ಮಹಾ ನಾಯಕನಾಗಿ ಕೀರ್ತಿಶೇಷ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಮುಖ್ಯರಾಗುತ್ತಾರೆ ಎನ್ನುತ್ತಾ, ಕಾಯ ಅಳಿದರೂ, ಅವರು ಮಾಡಿದ ಕಾಯಕದಿಂದ ಎಂದೆಂದಿಗೂ ಗಾಂಧೀಜಿ ಹಾಗೂ ಶಾಸ್ತ್ರಿಯವರು ಅಜರಾಮರರು ಎಂದು ಅವರು ಹೇಳಿದರು.

ಎಕ್ಸೆಲ್ ಪದವಿ ಪೂರ್ವ ಕಾಲೇಜು, ವಿದ್ಯಾ ಸಾಗರ ಕ್ಯಾಂಪಸ್ ನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಅರಮಲೆ ಬೆಟ್ಟ ಕ್ಯಾಂಪಸ್ ನ ಪ್ರಾಚಾರ್ಯರಾದ ಡಾ ಪ್ರಜ್ವಲ್ ಕಜೆ, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಉಪಪ್ರಾಂಶುಪಾಲ ರೋಹಿತ್, ಆಡಳಿತ ಮಂಡಳಿಯ ಸಹನಾ ಜೈನ್,ಶೈಕ್ಷಣಿಕ ಸಂಯೋಜಕರಾದ ನಿಶಾ ಪೂಜಾರಿ, ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡರು.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಳೀಯ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya
error: Content is protected !!