September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎನ್ ಡಿ ಎ ಫಲಿತಾಂಶ : ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಮಹೋನ್ನತ ದಾಖಲೆ

ಗುರುವಾಯನಕೆರೆ: ರಾಷ್ಟ್ರ ಮಟ್ಟದಲ್ಲಿ ನಡೆಯುವ ಅತ್ಯಂತ ಕಠಿಣ ಪರೀಕ್ಷೆಯೆನಿಸಿಕೊಂಡ ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯ ಫೇಸ್ ಟೂ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸ ದಾಖಲೆ ನಿರ್ಮಿಸಿದ್ದಾರೆ.


ಎನ್ ಡಿ ಎ ಪರೀಕ್ಷೆ ಬರೆದ ಸಮ್ಯಕ್ ವಿಜಯ್, ಸ್ವಸ್ತಿಕ್ ಎಂ ಜೈನ್, ಅಕ್ಷಯ್ ಎ, ಯತಿನ್ ಬಿ ಎಸ್ , ಪ್ರಜ್ವಲ್ ಗೌಡ ಆರ್ ಎಸ್, ಶಶಾಂಕ್ ಗೌಡ ಆರ್, ಅಭಿಷೇಕ್ ಅಡಪ್ಪ, ಲಕ್ಷ ಮಹಾಜನ್, ತೇಜಲ್ ವಿ, ಅಮೃತ್ ನಾಯಕ್, ಶಮಿತ್ ಗೌಡ ಎ ಎಸ್ ಇವರು ಎನ್ ಡಿ ಎ ಎಕ್ಸಾಂ ಫೇಸ್ ಒನ್ ನ್ನು ಯಶಸ್ವಿಯಾಗಿ ಬರೆದು, ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ನಿರಂತರವಾಗಿ ದೊಡ್ಡ ಮೊತ್ತದ ಸ್ಟೈಫಂಡ್ ಸಿಗುವ , ಭಾರತೀಯ ಸೇನೆಯ ವಿವಿಧ ವಿಭಾಗಗಳಲ್ಲಿ ಉನ್ನತ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸುವ, ರಾಷ್ಟ್ರ ಮಟ್ಟದಲ್ಲಿ ಕೇವಲ 400 ಸೀಟ್ ಗಳಿರುವ ಈ ಪರೀಕ್ಷೆಗೆ ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಸ್ಪರ್ಧಿಸುತ್ತಾರೆ. ಲಕ್ಷಾಂತರ ವಿದ್ಯಾರ್ಥಿಗಳ ಕನಸಿನ ಆಯ್ಕೆ ಎನ್ ಡಿ ಎ ಆಗಿರುತ್ತದೆ. ಅತ್ಯುತ್ತಮ ಟೀಚಿಂಗ್ – ಕೋಚಿಂಗ್ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ಮಾತ್ರ ಎನ್ ಡಿ ಎ ಯನ್ನು ಕ್ಲಿಯರ್ ಮಾಡಲು ಸಾಧ್ಯ.

ಎಕ್ಸೆಲ್ ಕಾಲೇಜಿನ 11 ಜನ ವಿದ್ಯಾರ್ಥಿಗಳು ಒಂದೇ ಬಾರಿಗೆ ಎನ್ ಡಿ ಎ ಕ್ಲಿಯರ್ ಮಾಡಿರುವುದು ನಿಜಕ್ಕೂ ಅಲ್ಲಿನ ಗುಣಮಟ್ಟದ ಶಿಕ್ಷಣಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.
ವಿದ್ಯಾರ್ಥಿಗಳ ಸಾಧನೆಗೆ ಎಕ್ಸೆಲ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ,ಪ್ರಾಂಶುಪಾಲರು, ಪ್ರಾಧ್ಯಾಪಕರು,ಸಂಯೋಜಕರಾದ ಜೋಸ್ಟಮ್ ಎ ಟಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಹಿರಿಯ ನಾಗರೀಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ, ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಪೀಢರ್ ಅಳವಡಿಸಿ, ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಗ್ರಾಹಕರ ಆಗ್ರಹ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya
error: Content is protected !!