23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎನ್ ಡಿ ಎ ಫಲಿತಾಂಶ : ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಮಹೋನ್ನತ ದಾಖಲೆ

ಗುರುವಾಯನಕೆರೆ: ರಾಷ್ಟ್ರ ಮಟ್ಟದಲ್ಲಿ ನಡೆಯುವ ಅತ್ಯಂತ ಕಠಿಣ ಪರೀಕ್ಷೆಯೆನಿಸಿಕೊಂಡ ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯ ಫೇಸ್ ಟೂ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸ ದಾಖಲೆ ನಿರ್ಮಿಸಿದ್ದಾರೆ.


ಎನ್ ಡಿ ಎ ಪರೀಕ್ಷೆ ಬರೆದ ಸಮ್ಯಕ್ ವಿಜಯ್, ಸ್ವಸ್ತಿಕ್ ಎಂ ಜೈನ್, ಅಕ್ಷಯ್ ಎ, ಯತಿನ್ ಬಿ ಎಸ್ , ಪ್ರಜ್ವಲ್ ಗೌಡ ಆರ್ ಎಸ್, ಶಶಾಂಕ್ ಗೌಡ ಆರ್, ಅಭಿಷೇಕ್ ಅಡಪ್ಪ, ಲಕ್ಷ ಮಹಾಜನ್, ತೇಜಲ್ ವಿ, ಅಮೃತ್ ನಾಯಕ್, ಶಮಿತ್ ಗೌಡ ಎ ಎಸ್ ಇವರು ಎನ್ ಡಿ ಎ ಎಕ್ಸಾಂ ಫೇಸ್ ಒನ್ ನ್ನು ಯಶಸ್ವಿಯಾಗಿ ಬರೆದು, ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ನಿರಂತರವಾಗಿ ದೊಡ್ಡ ಮೊತ್ತದ ಸ್ಟೈಫಂಡ್ ಸಿಗುವ , ಭಾರತೀಯ ಸೇನೆಯ ವಿವಿಧ ವಿಭಾಗಗಳಲ್ಲಿ ಉನ್ನತ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸುವ, ರಾಷ್ಟ್ರ ಮಟ್ಟದಲ್ಲಿ ಕೇವಲ 400 ಸೀಟ್ ಗಳಿರುವ ಈ ಪರೀಕ್ಷೆಗೆ ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಸ್ಪರ್ಧಿಸುತ್ತಾರೆ. ಲಕ್ಷಾಂತರ ವಿದ್ಯಾರ್ಥಿಗಳ ಕನಸಿನ ಆಯ್ಕೆ ಎನ್ ಡಿ ಎ ಆಗಿರುತ್ತದೆ. ಅತ್ಯುತ್ತಮ ಟೀಚಿಂಗ್ – ಕೋಚಿಂಗ್ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ಮಾತ್ರ ಎನ್ ಡಿ ಎ ಯನ್ನು ಕ್ಲಿಯರ್ ಮಾಡಲು ಸಾಧ್ಯ.

ಎಕ್ಸೆಲ್ ಕಾಲೇಜಿನ 11 ಜನ ವಿದ್ಯಾರ್ಥಿಗಳು ಒಂದೇ ಬಾರಿಗೆ ಎನ್ ಡಿ ಎ ಕ್ಲಿಯರ್ ಮಾಡಿರುವುದು ನಿಜಕ್ಕೂ ಅಲ್ಲಿನ ಗುಣಮಟ್ಟದ ಶಿಕ್ಷಣಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.
ವಿದ್ಯಾರ್ಥಿಗಳ ಸಾಧನೆಗೆ ಎಕ್ಸೆಲ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ,ಪ್ರಾಂಶುಪಾಲರು, ಪ್ರಾಧ್ಯಾಪಕರು,ಸಂಯೋಜಕರಾದ ಜೋಸ್ಟಮ್ ಎ ಟಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದಿ| ನಂದಕುಮಾರ್ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!