23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಸೇವೆ

ಬೆಳ್ತಂಗಡಿ: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದ ಅಂಗವಾಗಿ ಯುವವಾಹಿನಿ ಬೆಳ್ತಂಗಡಿ ಘಟಕದ ಸದಸ್ಯರು ಅ.01 ರಂದು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿ ದೇವರ ಸೇವೆ ಮಾಡಿದರು.


ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ನೇತೃತ್ವದಲ್ಲಿ ಒಟ್ಟು 85 ಜನ ಯುವವಾಹಿನಿ ಸದಸ್ಯರು ಸ್ವಯಂ ಸೇವಕರಾಗಿ ಭಾಗವಹಿಸಿದರು. ಕ್ಷೇತ್ರದ ವತಿಯಿಂದ ಕೋಶಾಧಿಕಾರಿಗಳಾದ ಪದ್ಮರಾಜ್ ಆರ್ ಹಾಗೂ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ಘಟಕದ ಅಧ್ಯಕ್ಷರನ್ನು ಅನುಗ್ರಹ ಪತ್ರವನ್ನು ನೀಡಿ ಗೌರವಿಸಿದರು ಈ ಸಂದರ್ಭದಲ್ಲಿ ಘಟಕದಿಂದ ಅನ್ನದಾನಕ್ಕೆ ಸಹಾಯಧನವನ್ನು ಹಸ್ತಾಂತರಿಸಲಾಯಿತು.


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯುವನಾಯಕರಾದ ರಕ್ಷಿತ್ ಶಿವರಾಂ ರವರು ಇಡೀ ದಿನ ಘಟಕದೊಂದಿಗೆ ಸ್ವಯಂ ಸೇವೆಯಲ್ಲಿ ಭಾಗವಹಿಸಿದ್ದು ಮಾತ್ರವಲ್ಲದೆ ಬೆಳ್ತಂಗಡಿಯಿಂದ ಕುದ್ರೋಳಿಗೆ ತೆರಳಲು ಬಸ್ಸಿನ ವ್ಯವಸ್ಥೆಯನ್ನೂ ಮಾಡಿದರು.
ಘಟಕದ ಸದಸ್ಯರು ಕ್ಷೇತ್ರದಲ್ಲಿ ಸೇವಕೌಂಟರ್, ಪ್ರಸಾದ ಪ್ಯಾಕಿಂಗ್, ಅನ್ನಪ್ರಸಾದ ವಿತರಣೆಯಲ್ಲಿ ಸಹಕರಿಸಿದರು.
ಘಟಕದ ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಎಂಕೆ ಪ್ರಸಾದ್, ಸುಜಾತ ಅಣ್ಣಿ ಪೂಜಾರಿ, ಸದಾಶಿವ ಪೂಜಾರಿ ಊರ, ಮಹಿಳಾ ಸಂಚಾಲನ ಸಮಿತಿ ಪ್ರಧಾನ ಸಂಚಾಲಕಿ ಲೀಲಾವತಿ ಪನಕಜೆ, ಘಟಕದ ಉಪಾಧ್ಯಕ್ಷರಾದ ಸಂತೋಷ್ ಸಾಲಿಯಾನ್ ಅರಳಿ, ಕಾರ್ಯದರ್ಶಿ ಮಧುರ ರಾಘವ್, ಕೋಶಾಧಿಕಾರಿ ನಾಗೇಶ್ ಆದೆಲು, ಕಾರ್ಯಕ್ರಮ ಸಂಯೋಜಕರಾದ ರಾಘವೇಂದ್ರ ಮೇಲಂತಬೆಟ್ಟು, ಜಯಶ್ರೀ ಕಿಲ್ಲೂರು, ಶೈಲೇಶ್ ಹಾಗೂ ಘಟಕದ ಸದಸ್ಯರು ಭಾಗವಹಿಸಿದ್ದರು.

Related posts

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya

ಪುದುವೆಟ್ಟು ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಲಕ್ಷ್ಮೀ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವಿ.ಪ. ಶಾಸಕ ಕಿಶೋರ್ ಕುಮಾರ್ ರವರಿಗೆ ಸನ್ಮಾನ

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya
error: Content is protected !!