22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಸೇವೆ

ಬೆಳ್ತಂಗಡಿ: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದ ಅಂಗವಾಗಿ ಯುವವಾಹಿನಿ ಬೆಳ್ತಂಗಡಿ ಘಟಕದ ಸದಸ್ಯರು ಅ.01 ರಂದು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿ ದೇವರ ಸೇವೆ ಮಾಡಿದರು.


ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ನೇತೃತ್ವದಲ್ಲಿ ಒಟ್ಟು 85 ಜನ ಯುವವಾಹಿನಿ ಸದಸ್ಯರು ಸ್ವಯಂ ಸೇವಕರಾಗಿ ಭಾಗವಹಿಸಿದರು. ಕ್ಷೇತ್ರದ ವತಿಯಿಂದ ಕೋಶಾಧಿಕಾರಿಗಳಾದ ಪದ್ಮರಾಜ್ ಆರ್ ಹಾಗೂ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ಘಟಕದ ಅಧ್ಯಕ್ಷರನ್ನು ಅನುಗ್ರಹ ಪತ್ರವನ್ನು ನೀಡಿ ಗೌರವಿಸಿದರು ಈ ಸಂದರ್ಭದಲ್ಲಿ ಘಟಕದಿಂದ ಅನ್ನದಾನಕ್ಕೆ ಸಹಾಯಧನವನ್ನು ಹಸ್ತಾಂತರಿಸಲಾಯಿತು.


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯುವನಾಯಕರಾದ ರಕ್ಷಿತ್ ಶಿವರಾಂ ರವರು ಇಡೀ ದಿನ ಘಟಕದೊಂದಿಗೆ ಸ್ವಯಂ ಸೇವೆಯಲ್ಲಿ ಭಾಗವಹಿಸಿದ್ದು ಮಾತ್ರವಲ್ಲದೆ ಬೆಳ್ತಂಗಡಿಯಿಂದ ಕುದ್ರೋಳಿಗೆ ತೆರಳಲು ಬಸ್ಸಿನ ವ್ಯವಸ್ಥೆಯನ್ನೂ ಮಾಡಿದರು.
ಘಟಕದ ಸದಸ್ಯರು ಕ್ಷೇತ್ರದಲ್ಲಿ ಸೇವಕೌಂಟರ್, ಪ್ರಸಾದ ಪ್ಯಾಕಿಂಗ್, ಅನ್ನಪ್ರಸಾದ ವಿತರಣೆಯಲ್ಲಿ ಸಹಕರಿಸಿದರು.
ಘಟಕದ ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಎಂಕೆ ಪ್ರಸಾದ್, ಸುಜಾತ ಅಣ್ಣಿ ಪೂಜಾರಿ, ಸದಾಶಿವ ಪೂಜಾರಿ ಊರ, ಮಹಿಳಾ ಸಂಚಾಲನ ಸಮಿತಿ ಪ್ರಧಾನ ಸಂಚಾಲಕಿ ಲೀಲಾವತಿ ಪನಕಜೆ, ಘಟಕದ ಉಪಾಧ್ಯಕ್ಷರಾದ ಸಂತೋಷ್ ಸಾಲಿಯಾನ್ ಅರಳಿ, ಕಾರ್ಯದರ್ಶಿ ಮಧುರ ರಾಘವ್, ಕೋಶಾಧಿಕಾರಿ ನಾಗೇಶ್ ಆದೆಲು, ಕಾರ್ಯಕ್ರಮ ಸಂಯೋಜಕರಾದ ರಾಘವೇಂದ್ರ ಮೇಲಂತಬೆಟ್ಟು, ಜಯಶ್ರೀ ಕಿಲ್ಲೂರು, ಶೈಲೇಶ್ ಹಾಗೂ ಘಟಕದ ಸದಸ್ಯರು ಭಾಗವಹಿಸಿದ್ದರು.

Related posts

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಭೇಟಿ: ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya
error: Content is protected !!