25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

ಗುರುವಾಯನಕೆರೆ: ಗಾಂಧೀಜಿಯವರ ಸತ್ಯ, ಅಹಿಂಸೆ ಮುಂತಾದ ಆದರ್ಶಗಳು ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಯವರ ದೇಶ ಪ್ರೇಮ ನಮಗೆ ದಾರಿದೀಪವಾಗಿದ್ದು ಅದನ್ನು ನಮ್ಮ ಜೀವನದಲ್ಲಿ ಅನುಸರಿಸಿಕೊಂಡು ಮುನ್ನಡೆಯಬೇಕೆಂದು ವಿದ್ವತ್ ಪಿ.ಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ.ಇ. ಮಂಡಗಳಲೆ ತಿಳಿಸಿದರು.

ಅವರು ವಿದ್ವತ್ ಪಿ.ಯು ಕಾಲೇಜಿನಲ್ಲಿಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಯವರ ಜನ್ಮ ದಿನಾಚರಣೆಯ ಮಹತ್ವವನ್ನು ತಿಳಿಸುತ್ತಾ ಈ ಮಾತುಗಳನ್ನಾಡಿದರು.
ಕಾರ್ಯಕ್ರಮವು ಕಾಲೇಜಿನ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಂತರ ಗಾಂಧೀಜಿಯವರ ಭಾವಚಿತ್ರಕ್ಕೆ ಸಂಸ್ಥೆಯ ಕಾರ್ಯದರ್ಶಿಯವರು, ಕಾಲೇಜಿನ ಶೈಕ್ಷಣಿಕ ನಿರ್ದೇಶಕರು, ಉಪನ್ಯಾಸಕ ವರ್ಗದವರು, ವಿದ್ಯಾರ್ಥಿ ಪ್ರತಿನಿಧಿಗಳು, ಪುಷ್ಪಾರ್ಚನೆ ಸಲ್ಲಿಸಿದರು. ನಂತರ ಗಾಂಧೀಜಿಯವರಿಗೆ ಪ್ರಿಯವಾದ ವೈಷ್ಣವ ಜಯತೋ ಮತ್ತು ರಘುಪತಿ ರಾಘವ ರಾಜಾರಾಮ್ ಭಜನೆಯನ್ನು ವಿದ್ಯಾರ್ಥಿಗಳು ಹಾಡಿದರು. ನಂತರ ಎಲ್ಲಾ ವಿದ್ಯಾರ್ಥಿಗಳು ದೇಶಭಕ್ತಿಗೀತೆಯನ್ನು ಹಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಯವರಾದ ಪ್ರಜ್ವಲ್ ರೈ, ಪ್ರಾಂಶುಪಾಲರಾದ ಹರೀಶ್.ಕೆ.ಆರ್, ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕರಾದ ಹರೀಶ್ ಬಳಂಜ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಬೆಳ್ತಂಗಡಿ : ತಾಲೂಕು ಆಶಾ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ – ಮಾಹಿತಿ ಶಿಬಿರ

Suddi Udaya

ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya
error: Content is protected !!