23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎನ್ ಡಿ ಎ ಫಲಿತಾಂಶ : ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಮಹೋನ್ನತ ದಾಖಲೆ

ಗುರುವಾಯನಕೆರೆ: ರಾಷ್ಟ್ರ ಮಟ್ಟದಲ್ಲಿ ನಡೆಯುವ ಅತ್ಯಂತ ಕಠಿಣ ಪರೀಕ್ಷೆಯೆನಿಸಿಕೊಂಡ ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯ ಫೇಸ್ ಟೂ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸ ದಾಖಲೆ ನಿರ್ಮಿಸಿದ್ದಾರೆ.


ಎನ್ ಡಿ ಎ ಪರೀಕ್ಷೆ ಬರೆದ ಸಮ್ಯಕ್ ವಿಜಯ್, ಸ್ವಸ್ತಿಕ್ ಎಂ ಜೈನ್, ಅಕ್ಷಯ್ ಎ, ಯತಿನ್ ಬಿ ಎಸ್ , ಪ್ರಜ್ವಲ್ ಗೌಡ ಆರ್ ಎಸ್, ಶಶಾಂಕ್ ಗೌಡ ಆರ್, ಅಭಿಷೇಕ್ ಅಡಪ್ಪ, ಲಕ್ಷ ಮಹಾಜನ್, ತೇಜಲ್ ವಿ, ಅಮೃತ್ ನಾಯಕ್, ಶಮಿತ್ ಗೌಡ ಎ ಎಸ್ ಇವರು ಎನ್ ಡಿ ಎ ಎಕ್ಸಾಂ ಫೇಸ್ ಒನ್ ನ್ನು ಯಶಸ್ವಿಯಾಗಿ ಬರೆದು, ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ನಿರಂತರವಾಗಿ ದೊಡ್ಡ ಮೊತ್ತದ ಸ್ಟೈಫಂಡ್ ಸಿಗುವ , ಭಾರತೀಯ ಸೇನೆಯ ವಿವಿಧ ವಿಭಾಗಗಳಲ್ಲಿ ಉನ್ನತ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸುವ, ರಾಷ್ಟ್ರ ಮಟ್ಟದಲ್ಲಿ ಕೇವಲ 400 ಸೀಟ್ ಗಳಿರುವ ಈ ಪರೀಕ್ಷೆಗೆ ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಸ್ಪರ್ಧಿಸುತ್ತಾರೆ. ಲಕ್ಷಾಂತರ ವಿದ್ಯಾರ್ಥಿಗಳ ಕನಸಿನ ಆಯ್ಕೆ ಎನ್ ಡಿ ಎ ಆಗಿರುತ್ತದೆ. ಅತ್ಯುತ್ತಮ ಟೀಚಿಂಗ್ – ಕೋಚಿಂಗ್ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ಮಾತ್ರ ಎನ್ ಡಿ ಎ ಯನ್ನು ಕ್ಲಿಯರ್ ಮಾಡಲು ಸಾಧ್ಯ.

ಎಕ್ಸೆಲ್ ಕಾಲೇಜಿನ 11 ಜನ ವಿದ್ಯಾರ್ಥಿಗಳು ಒಂದೇ ಬಾರಿಗೆ ಎನ್ ಡಿ ಎ ಕ್ಲಿಯರ್ ಮಾಡಿರುವುದು ನಿಜಕ್ಕೂ ಅಲ್ಲಿನ ಗುಣಮಟ್ಟದ ಶಿಕ್ಷಣಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.
ವಿದ್ಯಾರ್ಥಿಗಳ ಸಾಧನೆಗೆ ಎಕ್ಸೆಲ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ,ಪ್ರಾಂಶುಪಾಲರು, ಪ್ರಾಧ್ಯಾಪಕರು,ಸಂಯೋಜಕರಾದ ಜೋಸ್ಟಮ್ ಎ ಟಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನ, ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ರಾಜ್ಯಕ್ಕೆ ತೃತೀಯ ಸ್ಥಾನ

Suddi Udaya
error: Content is protected !!