ಬೆಳ್ತಂಗಡಿ: ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತವಾದ ಘಟನೆ ಇಂದು (ಅ.2 ) ನಡೆದಿದೆ.

ಕಾರ್ಕಳದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿರುವ ಅಪಾಯದಿಂದ ಪಾರಾಗಿದ್ದಾರೆ.











