23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ವತಿಯಿಂದ ಗ್ರಂಥಾಲಯಕ್ಕೆ ನೀಡಲಾದ ಪುಸ್ತಕಗಳು ಹಾಗೂ ಪೀಠೋಪಕರಣಗಳನ್ನು ಸ್ವೀಕರಿಸಿ ಅ.01ರಂದು ಉದ್ಘಾಟನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ಪಂಚಾಯತಿ ಅಧ್ಯಕ್ಷೆ ಸವಿತಾ ವಹಿಸಿದರು.
ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ಪ್ರಭಾಕರ ಆಚಾರ್ಯ , ವಿಜಯಲಕ್ಷ್ಮೀ., ಸ್ಥಳೀಯರಾದ ರಘುರಾಮ ಗಾಂಭೀರ, ಕೃಷ್ಣಪ್ಪ ಗೌಡ ಪ್ರಗತಿಪರ ಕೃಷಿಕರು, ದಯಾನಂದ ರೈ ಅಧ್ಯಕ್ಷರು ಶಾಲಾಡಳಿತ ಸಮಿತಿ, ಲಿಯೋ ಅಧ್ಯಕ್ಷೆ ಡಾ.ಭಾಷಿಣಿ, ಮುಖ್ಯೋಪಾಧ್ಯಾಯ ಜಿ ಮಂಜುನಾಥ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲಾಡಳಿತ ಸಮಿತಿಯ ಪದಾಧಿಕಾರಿಗಳು, ಶಾಲಾಭಿವೃದ್ಧಿ , ಸಮಿತಿಯ ಪದಾಧಿಕಾರಿಗಳು, ಶಾಲೆಯ ವಿದ್ಯಾರ್ಥಿಗಳು, ಮಕ್ಕಳ ಪೋಷಕರು, ಸವಣಾಲು ಫಲ್ಗುಣಿ ಮಹಿಳಾ ಭಜನಾ ಮಂಡಳಿಯ ಪದಾಧಿಕಾರಿಗಳು ,
ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮುಖ್ಯೋಪಾಧ್ಯಯರು ಸ್ವಾಗತಿಸಿದರು. ರಾಜೇಶ್ ಕೆ ಕಾರ್ಯಕ್ರಮ ನಿರೂಪಿಸಿದರು

Related posts

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

Suddi Udaya

ಅರಸಿನಮಕ್ಕಿ: ಕುಡಿಯುವ ನೀರಿನ ಸ್ಥಾವರ ಉದ್ಘಾಟನೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya
error: Content is protected !!