23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ವತಿಯಿಂದ ಗ್ರಂಥಾಲಯಕ್ಕೆ ನೀಡಲಾದ ಪುಸ್ತಕಗಳು ಹಾಗೂ ಪೀಠೋಪಕರಣಗಳನ್ನು ಸ್ವೀಕರಿಸಿ ಅ.01ರಂದು ಉದ್ಘಾಟನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ಪಂಚಾಯತಿ ಅಧ್ಯಕ್ಷೆ ಸವಿತಾ ವಹಿಸಿದರು.
ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ಪ್ರಭಾಕರ ಆಚಾರ್ಯ , ವಿಜಯಲಕ್ಷ್ಮೀ., ಸ್ಥಳೀಯರಾದ ರಘುರಾಮ ಗಾಂಭೀರ, ಕೃಷ್ಣಪ್ಪ ಗೌಡ ಪ್ರಗತಿಪರ ಕೃಷಿಕರು, ದಯಾನಂದ ರೈ ಅಧ್ಯಕ್ಷರು ಶಾಲಾಡಳಿತ ಸಮಿತಿ, ಲಿಯೋ ಅಧ್ಯಕ್ಷೆ ಡಾ.ಭಾಷಿಣಿ, ಮುಖ್ಯೋಪಾಧ್ಯಾಯ ಜಿ ಮಂಜುನಾಥ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲಾಡಳಿತ ಸಮಿತಿಯ ಪದಾಧಿಕಾರಿಗಳು, ಶಾಲಾಭಿವೃದ್ಧಿ , ಸಮಿತಿಯ ಪದಾಧಿಕಾರಿಗಳು, ಶಾಲೆಯ ವಿದ್ಯಾರ್ಥಿಗಳು, ಮಕ್ಕಳ ಪೋಷಕರು, ಸವಣಾಲು ಫಲ್ಗುಣಿ ಮಹಿಳಾ ಭಜನಾ ಮಂಡಳಿಯ ಪದಾಧಿಕಾರಿಗಳು ,
ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮುಖ್ಯೋಪಾಧ್ಯಯರು ಸ್ವಾಗತಿಸಿದರು. ರಾಜೇಶ್ ಕೆ ಕಾರ್ಯಕ್ರಮ ನಿರೂಪಿಸಿದರು

Related posts

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

Suddi Udaya
error: Content is protected !!