ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ವತಿಯಿಂದ ಗ್ರಂಥಾಲಯಕ್ಕೆ ನೀಡಲಾದ ಪುಸ್ತಕಗಳು ಹಾಗೂ ಪೀಠೋಪಕರಣಗಳನ್ನು ಸ್ವೀಕರಿಸಿ ಅ.01ರಂದು ಉದ್ಘಾಟನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ಪಂಚಾಯತಿ ಅಧ್ಯಕ್ಷೆ ಸವಿತಾ ವಹಿಸಿದರು.
ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ಪ್ರಭಾಕರ ಆಚಾರ್ಯ , ವಿಜಯಲಕ್ಷ್ಮೀ., ಸ್ಥಳೀಯರಾದ ರಘುರಾಮ ಗಾಂಭೀರ, ಕೃಷ್ಣಪ್ಪ ಗೌಡ ಪ್ರಗತಿಪರ ಕೃಷಿಕರು, ದಯಾನಂದ ರೈ ಅಧ್ಯಕ್ಷರು ಶಾಲಾಡಳಿತ ಸಮಿತಿ, ಲಿಯೋ ಅಧ್ಯಕ್ಷೆ ಡಾ.ಭಾಷಿಣಿ, ಮುಖ್ಯೋಪಾಧ್ಯಾಯ ಜಿ ಮಂಜುನಾಥ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲಾಡಳಿತ ಸಮಿತಿಯ ಪದಾಧಿಕಾರಿಗಳು, ಶಾಲಾಭಿವೃದ್ಧಿ , ಸಮಿತಿಯ ಪದಾಧಿಕಾರಿಗಳು, ಶಾಲೆಯ ವಿದ್ಯಾರ್ಥಿಗಳು, ಮಕ್ಕಳ ಪೋಷಕರು, ಸವಣಾಲು ಫಲ್ಗುಣಿ ಮಹಿಳಾ ಭಜನಾ ಮಂಡಳಿಯ ಪದಾಧಿಕಾರಿಗಳು ,
ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮುಖ್ಯೋಪಾಧ್ಯಯರು ಸ್ವಾಗತಿಸಿದರು. ರಾಜೇಶ್ ಕೆ ಕಾರ್ಯಕ್ರಮ ನಿರೂಪಿಸಿದರು

Related posts

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

Suddi Udaya

ಸೌಜನ್ಯ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ದೂರು

Suddi Udaya

ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಟಿ. ಪ್ರಕಾಶ ಪ್ರಭು ರವರಿಗೆ ಡಾಕ್ಟರೇಟ್ ಪದವಿ

Suddi Udaya

ಲಾಯಿಲ: ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಶಿಶಿಲ :2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಹಾಗೂ ಶಿಶಿಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ಸೇವಾ ನಿವೃತ್ತಿ

Suddi Udaya
error: Content is protected !!