September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಸೇವೆ

ಬೆಳ್ತಂಗಡಿ: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದ ಅಂಗವಾಗಿ ಯುವವಾಹಿನಿ ಬೆಳ್ತಂಗಡಿ ಘಟಕದ ಸದಸ್ಯರು ಅ.01 ರಂದು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿ ದೇವರ ಸೇವೆ ಮಾಡಿದರು.


ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ನೇತೃತ್ವದಲ್ಲಿ ಒಟ್ಟು 85 ಜನ ಯುವವಾಹಿನಿ ಸದಸ್ಯರು ಸ್ವಯಂ ಸೇವಕರಾಗಿ ಭಾಗವಹಿಸಿದರು. ಕ್ಷೇತ್ರದ ವತಿಯಿಂದ ಕೋಶಾಧಿಕಾರಿಗಳಾದ ಪದ್ಮರಾಜ್ ಆರ್ ಹಾಗೂ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ಘಟಕದ ಅಧ್ಯಕ್ಷರನ್ನು ಅನುಗ್ರಹ ಪತ್ರವನ್ನು ನೀಡಿ ಗೌರವಿಸಿದರು ಈ ಸಂದರ್ಭದಲ್ಲಿ ಘಟಕದಿಂದ ಅನ್ನದಾನಕ್ಕೆ ಸಹಾಯಧನವನ್ನು ಹಸ್ತಾಂತರಿಸಲಾಯಿತು.


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯುವನಾಯಕರಾದ ರಕ್ಷಿತ್ ಶಿವರಾಂ ರವರು ಇಡೀ ದಿನ ಘಟಕದೊಂದಿಗೆ ಸ್ವಯಂ ಸೇವೆಯಲ್ಲಿ ಭಾಗವಹಿಸಿದ್ದು ಮಾತ್ರವಲ್ಲದೆ ಬೆಳ್ತಂಗಡಿಯಿಂದ ಕುದ್ರೋಳಿಗೆ ತೆರಳಲು ಬಸ್ಸಿನ ವ್ಯವಸ್ಥೆಯನ್ನೂ ಮಾಡಿದರು.
ಘಟಕದ ಸದಸ್ಯರು ಕ್ಷೇತ್ರದಲ್ಲಿ ಸೇವಕೌಂಟರ್, ಪ್ರಸಾದ ಪ್ಯಾಕಿಂಗ್, ಅನ್ನಪ್ರಸಾದ ವಿತರಣೆಯಲ್ಲಿ ಸಹಕರಿಸಿದರು.
ಘಟಕದ ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಎಂಕೆ ಪ್ರಸಾದ್, ಸುಜಾತ ಅಣ್ಣಿ ಪೂಜಾರಿ, ಸದಾಶಿವ ಪೂಜಾರಿ ಊರ, ಮಹಿಳಾ ಸಂಚಾಲನ ಸಮಿತಿ ಪ್ರಧಾನ ಸಂಚಾಲಕಿ ಲೀಲಾವತಿ ಪನಕಜೆ, ಘಟಕದ ಉಪಾಧ್ಯಕ್ಷರಾದ ಸಂತೋಷ್ ಸಾಲಿಯಾನ್ ಅರಳಿ, ಕಾರ್ಯದರ್ಶಿ ಮಧುರ ರಾಘವ್, ಕೋಶಾಧಿಕಾರಿ ನಾಗೇಶ್ ಆದೆಲು, ಕಾರ್ಯಕ್ರಮ ಸಂಯೋಜಕರಾದ ರಾಘವೇಂದ್ರ ಮೇಲಂತಬೆಟ್ಟು, ಜಯಶ್ರೀ ಕಿಲ್ಲೂರು, ಶೈಲೇಶ್ ಹಾಗೂ ಘಟಕದ ಸದಸ್ಯರು ಭಾಗವಹಿಸಿದ್ದರು.

Related posts

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ CSEET ಓರಿಯೆಂಟೇಷನ್ ಕಾರ್ಯಾಗಾರ

Suddi Udaya

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

Suddi Udaya
error: Content is protected !!