23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

ಗುರುವಾಯನಕೆರೆ: ಗಾಂಧೀಜಿಯವರ ಸತ್ಯ, ಅಹಿಂಸೆ ಮುಂತಾದ ಆದರ್ಶಗಳು ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಯವರ ದೇಶ ಪ್ರೇಮ ನಮಗೆ ದಾರಿದೀಪವಾಗಿದ್ದು ಅದನ್ನು ನಮ್ಮ ಜೀವನದಲ್ಲಿ ಅನುಸರಿಸಿಕೊಂಡು ಮುನ್ನಡೆಯಬೇಕೆಂದು ವಿದ್ವತ್ ಪಿ.ಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ.ಇ. ಮಂಡಗಳಲೆ ತಿಳಿಸಿದರು.

ಅವರು ವಿದ್ವತ್ ಪಿ.ಯು ಕಾಲೇಜಿನಲ್ಲಿಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಯವರ ಜನ್ಮ ದಿನಾಚರಣೆಯ ಮಹತ್ವವನ್ನು ತಿಳಿಸುತ್ತಾ ಈ ಮಾತುಗಳನ್ನಾಡಿದರು.
ಕಾರ್ಯಕ್ರಮವು ಕಾಲೇಜಿನ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಂತರ ಗಾಂಧೀಜಿಯವರ ಭಾವಚಿತ್ರಕ್ಕೆ ಸಂಸ್ಥೆಯ ಕಾರ್ಯದರ್ಶಿಯವರು, ಕಾಲೇಜಿನ ಶೈಕ್ಷಣಿಕ ನಿರ್ದೇಶಕರು, ಉಪನ್ಯಾಸಕ ವರ್ಗದವರು, ವಿದ್ಯಾರ್ಥಿ ಪ್ರತಿನಿಧಿಗಳು, ಪುಷ್ಪಾರ್ಚನೆ ಸಲ್ಲಿಸಿದರು. ನಂತರ ಗಾಂಧೀಜಿಯವರಿಗೆ ಪ್ರಿಯವಾದ ವೈಷ್ಣವ ಜಯತೋ ಮತ್ತು ರಘುಪತಿ ರಾಘವ ರಾಜಾರಾಮ್ ಭಜನೆಯನ್ನು ವಿದ್ಯಾರ್ಥಿಗಳು ಹಾಡಿದರು. ನಂತರ ಎಲ್ಲಾ ವಿದ್ಯಾರ್ಥಿಗಳು ದೇಶಭಕ್ತಿಗೀತೆಯನ್ನು ಹಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಯವರಾದ ಪ್ರಜ್ವಲ್ ರೈ, ಪ್ರಾಂಶುಪಾಲರಾದ ಹರೀಶ್.ಕೆ.ಆರ್, ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕರಾದ ಹರೀಶ್ ಬಳಂಜ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಬ್ಯಾಂಕ್‌ನಿಂದ ಸ್ವಚ್ಛತಾ ಅಭಿಯಾನ

Suddi Udaya
error: Content is protected !!