22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದಿಂದ 26ನೇ ವರ್ಷದ ಆಟೋಟ ಸ್ಪರ್ಧೆ

ಕಲ್ಮಂಜ: ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್ ಕಲ್ಮಂಜದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ದಿ. ಮಹಾವೀರ ಜೈನ್ ಹುಣಿಪ್ಪಾಜೆ ಇವರ ಸ್ಮರಣಾರ್ಥ 26ನೇ ವರ್ಷದ ಆಟೋಟ ಸ್ಪರ್ಧೆಗಳ ಕಾರ್ಯಕ್ರಮ ಇತ್ತೀಚೆಗೆ ಅಕ್ಷಯನಗರದಲ್ಲಿ ಜರುಗಿತು.

ಬೆಳಿಗ್ಗೆ ರತನ್ ಕುಮಾರ್ ಜೈನ್ ಹುಣಿಪ್ಪಾಜೆ, ಆಡಳಿತ ಮೊಕ್ತೆಸರರು ಶಾಂತಿನಾಥ ಸ್ವಾಮಿ ಜೈನ ಬಸದಿ ನಿಡಿಗಲ್ ಇವರ ಗೌರವಾಧ್ಯಕ್ಷತೆಯಲ್ಲಿ ಊರಿನ ಹಿರಿಯರು ಕೃಷಿಕರಾದ ಶಾಂತಪ್ಪ ಗೌಡ ಗುಮ್ಮಡಬೈಲು ಇವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು ಪ್ರವೀಣ್ ಲಿಂಗಾಯತ ಬಿರ್ಮೆರೆಪಲ್ಕೆ ಕ್ರೀಡಾಧ್ಯಕ್ಷರು ವಹಿಸಿದ್ದರು. ಅತಿಥಿಗಳಾಗಿ ಶ್ರೀಮತಿ ವಿಮಲಾ ಗೌಡ ಅಧ್ಯಕ್ಷರು ಗ್ರಾಮ ಪಂಚಾಯತ್ ಕಲ್ಮಂಜ, ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಗೌಡ, ಸಿವಿಲ್ ಇಂಜಿನಿಯರ್ ಪಿ. ಬಿ. ಜಿ. ಕನ್ಸ್ಟ್ರಕ್ಷನ್ ಉಜಿರೆ ಮತ್ತು ಉಪನ್ಯಾಸಕ ಪ್ರವೀಣ್ ಗೌಡ ಬಿ. , ಸಂಗಮಶ್ರೀ ಯುವಕ ಮಂಡಲ ಸಿದ್ದಬೈಲು – ಕಲ್ಮಂಜ, ಅಧ್ಯಕ್ಷ ಜಗನ್ನಾಥ ಶೆಟ್ಟಿ,, ಶ್ರೀಮತಿ ಜಯಂತಿ ವಿಶ್ವನಾಥ ಪೂಜಾರಿ ಸ್ಥಳೀಯ ಸಂಪನ್ಮೂಲ ವ್ಯಕ್ತಿ, ಅಕ್ಷಯನಗರ ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದಲ್ಲಿ ಸಭಾಧ್ಯಕ್ಷತೆಯನ್ನು ಗೆಳೆಯರ ಬಳಗದ ಅಧ್ಯಕ್ಷ ಸುಬ್ರಾಯ ಅಕ್ಷಯನಗರ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕಿರಣ್ ಚಂದ್ರ ಡಿ ಪುಷ್ಪಗಿರಿ, ಧಾರ್ಮಿಕ ಮುಖಂಡರು ಉರುವಾಲು, ರೋಶನ್ ಡಿಸೋಜಾ ಸಹಶಿಕ್ಷಕರು ಸ. ಪ್ರೌ ಶಾಲೆ ಬಂಗಾಡಿ, ಅಶ್ವತ್ ಶೆಟ್ಟಿ ಮೆನೇಜರ್ ಶೀತಲ್ ಗಾರ್ಡನ್ ಉಜಿರೆ, ರವಿ ಮುಂಡತ್ತೋಡಿ ಅಧ್ಯಕ್ಷರು ಗೆಳೆಯರ ಬಳಗ ಮುಂಡತ್ತೋಡಿ ಉಜಿರೆ, ಧನೇಶ್, ಧನ್ವಿ ಆಂಬುಲೆನ್ಸ್ ಉಜಿರೆ, ಚೆನ್ನಕೇಶವ ಅರಸುಮಜಲು, ಸಿವಿಲ್ ಗುತ್ತಿಗೆದಾರರು ಸೋಮಂತಡ್ಕ, ಅಶೋಕ್ ಕರ್ಕೇರ, ಸಿವಿಲ್ ಕಂಟ್ರಾಕ್ಟರ್, ಮುಂಡತ್ತೋಡಿ, ಕೇಶವ ಪೂಜಾರಿ, ಅಧ್ಯಕ್ಷರು ಆಟೋ ಚಾಲಕರ ಸಂಘ ಉಜಿರೆ, ಪ್ರವೀಣ್ ಪೆರ್ನಾಂಡೀಸ್ ಹಳ್ಳಿಮನೆ ಉಜಿರೆ, ಹಮೀದ್ ಬಿ. ಎನ್. ನಿಡಿಗಲ್ ಮುಂತಾದ ಅತಿಥಿ ಅಭ್ಯಾಗತರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ 2024-2025ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸಿರುವ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ನಂತರ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಊರಿನ ಪರವೂರಿನ ಕ್ರೀಡಾಪಟುಗಳ, ಕ್ರೀಡಾ ಪೋಷಕರ, ಬಳಗದ ಸರ್ವ ಸದಸ್ಯರು ಸಹಕರಿಸಿದರು.


ರವಿ ಟಿ ಕಂದೂರುರವರ ಪ್ರಾರ್ಥಿಸಿ, ಅಶೋಕ್ ಪೂಜಾರಿ ಬಳ್ಳಿದಡ್ಡ ಸ್ವಾಗತಿಸಿ, ಚಿದಾನಂದ ಶೈವ ಅಕ್ಷಯನಗರ ಧನ್ಯವಾದವಿತ್ತರು. ಶ್ರೀಮತಿ ಯಶೋಧ ಪಿ ಹಾಗೂ ಬಾಲಕೃಷ್ಣ ಲಿಂಗಾಯತ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!