September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

ಕೊಕ್ಕಡ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೊಕ್ಕಡ ಮಂಡಲದ ವಿಜಯದಶಮಿ ಉತ್ಸವವು ಕೊಕ್ಕಡ ಶ್ರೀರಾಮ ಸೇವಾ ಮಂದಿರದಲ್ಲಿ ಕೊಕ್ಕಡ ಮತ್ತು ಪಟ್ರಮೆ ಗ್ರಾಮಗಳನ್ನೊಳಗೊಂಡ ಕೊಕ್ಕಡ ಮಂಡಲದ ಸ್ವಯಂಸೇವಕರು ಮತ್ತು ಸಜ್ಜನ ಬಂಧುಗಳು, ಮಾತಾ ಭಗಿನಿಯರು ಪಾಲ್ಗೊಳ್ಳುವುದರ ಮೂಲಕ ನಡೆಯಿತು.

ಕೊಕ್ಕಡ ಮಂಡಲದ ಸ್ವಯಂಸೇವಕರು ಸಂಘದ ಗಣವೇಶವನ್ನು ಧರಿಸಿ ಬಂದು ಸಂಘದ ಉಪವಿಷ್ಟ ವ್ಯಾಯಮದಲ್ಲಿ ತೊಡಗಿಸಿಕೊಂಡರು. ವಿಜಯದಶಮಿ ಉತ್ಸವದ ಅಧ್ಯಕ್ಷತೆಯನ್ನು ನಿವೃತ್ತ ಸೇನಾನಿ ಶ್ರೀಜಿತ್ ಪಡ್ಡಡ್ಕ ವಹಿಸಿದ್ದರು. ಬೌದ್ಧಿಕನ್ನು ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರಜ್ವಲ್ ಕಜೆ ಇವರು ನೆರವೇರಿಸಿಕೊಟ್ಟರು. ಮುಖ್ಯ ಶಿಕ್ಷಕ. ಮಹೇಶ್, ಪ್ರಾರ್ಥನೆ ತೇಜಸ್, ಸ್ವಾಗತ ಮತ್ತು ಪರಿಚಯ ಪುರಂದರ ಕಡೀರ, ಹಾಗೂ ಧನ್ಯವಾದವನ್ನು ಹರೀಶ್ ಅಪ್ರೋಡಿ ಇವರುಗಳು ನೆರವೇರಿಸಿದರು. ವೈಯಕ್ತಿಕ ಗೀತೆ ಯನ್ನು ವಿಕ್ರಮ್ ಮರುವಂತಿಲ ಹಾಡಿದರು.
ಅಮೃತವಚನವನ್ನು ಶ್ರೇಯಸ್ ಕಡೀರ ವಾಚಿಸಿದರು. ಮಂಡಲ ಕಾರ್ಯವಾಹ ಸುದರ್ಶನ್ ಹಿತ್ತಿಲು ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya

ಬದನಾಜೆ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹ ಆಚರಣೆ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಜೂ.26: ಸೌಮ್ಯತಿಲಕ್ ಶೆಟ್ಟಿ ಇವರ ‘ಮಸಿಯ ಮಾತು’ ಕವನ ಸಂಕಲನ ಬಿಡುಗಡೆ

Suddi Udaya
error: Content is protected !!