July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

ಕೊಕ್ಕಡ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೊಕ್ಕಡ ಮಂಡಲದ ವಿಜಯದಶಮಿ ಉತ್ಸವವು ಕೊಕ್ಕಡ ಶ್ರೀರಾಮ ಸೇವಾ ಮಂದಿರದಲ್ಲಿ ಕೊಕ್ಕಡ ಮತ್ತು ಪಟ್ರಮೆ ಗ್ರಾಮಗಳನ್ನೊಳಗೊಂಡ ಕೊಕ್ಕಡ ಮಂಡಲದ ಸ್ವಯಂಸೇವಕರು ಮತ್ತು ಸಜ್ಜನ ಬಂಧುಗಳು, ಮಾತಾ ಭಗಿನಿಯರು ಪಾಲ್ಗೊಳ್ಳುವುದರ ಮೂಲಕ ನಡೆಯಿತು.

ಕೊಕ್ಕಡ ಮಂಡಲದ ಸ್ವಯಂಸೇವಕರು ಸಂಘದ ಗಣವೇಶವನ್ನು ಧರಿಸಿ ಬಂದು ಸಂಘದ ಉಪವಿಷ್ಟ ವ್ಯಾಯಮದಲ್ಲಿ ತೊಡಗಿಸಿಕೊಂಡರು. ವಿಜಯದಶಮಿ ಉತ್ಸವದ ಅಧ್ಯಕ್ಷತೆಯನ್ನು ನಿವೃತ್ತ ಸೇನಾನಿ ಶ್ರೀಜಿತ್ ಪಡ್ಡಡ್ಕ ವಹಿಸಿದ್ದರು. ಬೌದ್ಧಿಕನ್ನು ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರಜ್ವಲ್ ಕಜೆ ಇವರು ನೆರವೇರಿಸಿಕೊಟ್ಟರು. ಮುಖ್ಯ ಶಿಕ್ಷಕ. ಮಹೇಶ್, ಪ್ರಾರ್ಥನೆ ತೇಜಸ್, ಸ್ವಾಗತ ಮತ್ತು ಪರಿಚಯ ಪುರಂದರ ಕಡೀರ, ಹಾಗೂ ಧನ್ಯವಾದವನ್ನು ಹರೀಶ್ ಅಪ್ರೋಡಿ ಇವರುಗಳು ನೆರವೇರಿಸಿದರು. ವೈಯಕ್ತಿಕ ಗೀತೆ ಯನ್ನು ವಿಕ್ರಮ್ ಮರುವಂತಿಲ ಹಾಡಿದರು.
ಅಮೃತವಚನವನ್ನು ಶ್ರೇಯಸ್ ಕಡೀರ ವಾಚಿಸಿದರು. ಮಂಡಲ ಕಾರ್ಯವಾಹ ಸುದರ್ಶನ್ ಹಿತ್ತಿಲು ನಿರೂಪಿಸಿದರು.

Related posts

ನಾರಾವಿ ಸ.ಉ.ಪ್ರಾ. ಶಾಲೆಯಲ್ಲಿ ದಾನಿಗಳಿಂದ ಉಚಿತ ಬ್ಯಾಗ್ ವಿತರಣೆ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

Suddi Udaya

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya
error: Content is protected !!