September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಜಯ ದಶಮಿಯಂದು ಗೆಜ್ಜೆ ಗಿರಿಯಲ್ಲಿ ಒಂಬತ್ತನೇ ಮಹಾಸಭೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಡಳಿತ ಸಮಿತಿಯ ಒಂಬತ್ತನೇ ಮಹಾಸಭೆಯು ವಿಜಯ ದಶಮಿಯಂದು ಕ್ಷೇತ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿ ಮುಂದಿನ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಲಾಯಿತು. ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆಯವರು ಪ್ರಸ್ತಾವಿಸಿ ಸ್ವಾಗತಿಸಿದರು. ರವಿ ಪೂಜಾರಿ ಚಿಲಿಂಬಿ ಅಧ್ಯಕ್ಷತೆ ವಹಿಸಿ ನ. 23ರಂದು ಗೆಜ್ಜೆ ಗಿರಿಯಲ್ಲಿ ನಡೆಯುವ ವಸತಿ ಗ್ರಹಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸರ್ವರೂ ಭಾಗವಹಿಸಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ಗೌರವಾಧ್ಯಕ್ಷ ಜಯಂತ ನಡುಬೈಲು, ಉಪಾಧ್ಯಕ್ಷ ಉಲ್ಲಾಸ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್ ರವರು ಗತ ವರ್ಷದ ವರದಿಯನ್ನು ಯಾಚಿಸಿದರು. ಜೊತೆ ಕಾರ್ಯದರ್ಶಿಗಳಾದ ಡಾ. ಸಂತೋಷ್ ಬೈರಂಪಲ್ಲಿ ಜೈ ವಿಕ್ರಮ ಕಲ್ಲಾಪು ಹಾಜರಿದ್ದು ಕೋಶಾಧಿಕಾರಿ ಮೋಹನ ದಾಸ್ ಬಂಗೇರ ವಾಮಂಜೂರು ಲೆಕ್ಕಪತ್ರಗಳನ್ನು ಮಂಡಿಸಿದರು.
ಗಣ್ಯರಾದ ದುಬೈಯ ಸತೀಶ್ ಪೂಜಾರಿ ಬೆಳಪು, ಪ್ರಭಾಕರ್ ಕರ್ನಿರೆ , ದಕ್ಷಿಣ ಆಫ್ರಿಕದ ಸೋಮನಾಥ ಪೂಜಾರಿ, ಉಡುಪಿ ಗೋವಾದ ಚಂದ್ರಹಾಸ ಅಮೀನ್, ಶ್ರೀಮತಿ ಸುಜಿತಾ ವಿ ಬಂಗೇರ, ಸಂಜೀವ ಪೂಜಾರಿ ಬಿರುವ ಸೆಂಟರ್, ಪ್ರಾಮಲ್ ಕುಮಾರ್ ಕಾರ್ಕಳ, ಹರಿಶ್ಚಂದ್ರ ಅಮಿನ್ ಕಟಪಾಡಿ, ಶ್ರೀಕುಮಾರ್ ಮೂಡಬಿದ್ರಿ, ನಾರಾಯಣ ಮಚ್ಚಿನ, ನವೀನ್ ಅಮೀನ್ ಉಡುಪಿ, ನವೀನ್ ಸುವರ್ಣ ಸದೀಪ, ನವನೀತ್ ಹಿಂಗಾಣಿ, ನಾಗೇಶ್ ಪೂಜಾರಿ , ಜಯರಾಮ ಬಂಗೇರ, ಜಯ ರಾಮ ಪೂಜಾರಿ ಬೀಳುವಾಯಿ, ನಾಗೇಶ್ ಪೂಜಾರಿ, ಬೈಕಂಪಾಡಿ, ರಾಘವೇಂದ್ರ, ಹಾಜರಿದ್ದರು.

ಉಪಾಧ್ಯಕ್ಷ ದೀಪಕ್ ಕೋಟ್ಯಾನ್ ಧನ್ಯವಾದ ಸಮರ್ಪಿಸಿದರು.

Related posts

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya

ಹ್ಯಾಕರ್ ಗಳ ವಂಚನೆಗೆ ಸಿಲುಕಿ ರಿಯಾದ್ ಜೈಲಿನಲ್ಲಿರುವ ಚಂದ್ರಶೇಖರ್: ಚಂದ್ರಶೇಖರ್ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೇಂದ್ರ ಸರ್ಕಾರಕ್ಕೆ ಒತ್ತಾಯ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ಶಿಬಾಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ವಿನೂತನ ಯೋಜನೆ: ಕ್ಷೇತ್ರದಿಂದ ಹೊರಗಿದ್ದರೂ ಪ್ರತಿದಿನದ ಪೂಜೆಯನ್ನು ಯೂಟ್ಯೂಬ್ ಮೂಲಕ ನೇರವಾಗಿ ನೋಡುವ ಅವಕಾಶ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya
error: Content is protected !!