25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಜಯ ದಶಮಿಯಂದು ಗೆಜ್ಜೆ ಗಿರಿಯಲ್ಲಿ ಒಂಬತ್ತನೇ ಮಹಾಸಭೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಡಳಿತ ಸಮಿತಿಯ ಒಂಬತ್ತನೇ ಮಹಾಸಭೆಯು ವಿಜಯ ದಶಮಿಯಂದು ಕ್ಷೇತ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿ ಮುಂದಿನ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಲಾಯಿತು. ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆಯವರು ಪ್ರಸ್ತಾವಿಸಿ ಸ್ವಾಗತಿಸಿದರು. ರವಿ ಪೂಜಾರಿ ಚಿಲಿಂಬಿ ಅಧ್ಯಕ್ಷತೆ ವಹಿಸಿ ನ. 23ರಂದು ಗೆಜ್ಜೆ ಗಿರಿಯಲ್ಲಿ ನಡೆಯುವ ವಸತಿ ಗ್ರಹಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸರ್ವರೂ ಭಾಗವಹಿಸಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ಗೌರವಾಧ್ಯಕ್ಷ ಜಯಂತ ನಡುಬೈಲು, ಉಪಾಧ್ಯಕ್ಷ ಉಲ್ಲಾಸ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್ ರವರು ಗತ ವರ್ಷದ ವರದಿಯನ್ನು ಯಾಚಿಸಿದರು. ಜೊತೆ ಕಾರ್ಯದರ್ಶಿಗಳಾದ ಡಾ. ಸಂತೋಷ್ ಬೈರಂಪಲ್ಲಿ ಜೈ ವಿಕ್ರಮ ಕಲ್ಲಾಪು ಹಾಜರಿದ್ದು ಕೋಶಾಧಿಕಾರಿ ಮೋಹನ ದಾಸ್ ಬಂಗೇರ ವಾಮಂಜೂರು ಲೆಕ್ಕಪತ್ರಗಳನ್ನು ಮಂಡಿಸಿದರು.
ಗಣ್ಯರಾದ ದುಬೈಯ ಸತೀಶ್ ಪೂಜಾರಿ ಬೆಳಪು, ಪ್ರಭಾಕರ್ ಕರ್ನಿರೆ , ದಕ್ಷಿಣ ಆಫ್ರಿಕದ ಸೋಮನಾಥ ಪೂಜಾರಿ, ಉಡುಪಿ ಗೋವಾದ ಚಂದ್ರಹಾಸ ಅಮೀನ್, ಶ್ರೀಮತಿ ಸುಜಿತಾ ವಿ ಬಂಗೇರ, ಸಂಜೀವ ಪೂಜಾರಿ ಬಿರುವ ಸೆಂಟರ್, ಪ್ರಾಮಲ್ ಕುಮಾರ್ ಕಾರ್ಕಳ, ಹರಿಶ್ಚಂದ್ರ ಅಮಿನ್ ಕಟಪಾಡಿ, ಶ್ರೀಕುಮಾರ್ ಮೂಡಬಿದ್ರಿ, ನಾರಾಯಣ ಮಚ್ಚಿನ, ನವೀನ್ ಅಮೀನ್ ಉಡುಪಿ, ನವೀನ್ ಸುವರ್ಣ ಸದೀಪ, ನವನೀತ್ ಹಿಂಗಾಣಿ, ನಾಗೇಶ್ ಪೂಜಾರಿ , ಜಯರಾಮ ಬಂಗೇರ, ಜಯ ರಾಮ ಪೂಜಾರಿ ಬೀಳುವಾಯಿ, ನಾಗೇಶ್ ಪೂಜಾರಿ, ಬೈಕಂಪಾಡಿ, ರಾಘವೇಂದ್ರ, ಹಾಜರಿದ್ದರು.

ಉಪಾಧ್ಯಕ್ಷ ದೀಪಕ್ ಕೋಟ್ಯಾನ್ ಧನ್ಯವಾದ ಸಮರ್ಪಿಸಿದರು.

Related posts

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಬೀಳುವ ಸ್ಥಿತಿಯಲ್ಲಿದ್ದ ಬೋರ್ಡನ್ನು ತೆರವುಗೊಳಿಸಿದ ನ.ಪಂ.

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya
error: Content is protected !!