September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಅ.02 ರಂದು ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆಯನ್ನು ಜಂಟಿಯಾಗಿ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪಿತ ಗಾಂಧೀಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.

ಸಭೆಯ ಅಧ್ಯಕ್ಷ ಸ್ಥಾನವನ್ನಲಂಕರಿಸಿದ್ದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ.ಯು.ಸಿ.ಪೌಲೋಸ್ ರವರು ಮಾತನಾಡಿ, ರಾಷ್ಟ್ರಪಿತ ಗಾಂಧೀಜಿಯವರ ಅಹಿಂಸೆಯ ಚೈತನ್ಯವು ನಮ್ಮನ್ನು ಶಾಂತಿಯುತ ಪ್ರಪಂಚದತ್ತ ಮುನ್ನಡೆಸಲಿ. ನಮ್ಮ ರಾಷ್ಟ್ರಪಿತರ ಬದುಕು, ಬೋಧನೆ, ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು. ಸಿಯೋನ್ ಆಶ್ರಮದಲ್ಲಿ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸುವ ಪ್ರಾಮುಖ್ಯತೆ ಬಗ್ಗೆ ವಿವರಿಸಿದರು. ಹಿರಿಯರನ್ನು ಗೌರವಿಸಿ, ನೆಮ್ಮದಿಯ ಬದುಕು ಕಲ್ಪಿಸಿಕೊಡುವುದರಿಂದ ಮಾನವ ಜನ್ಮ ಸಾರ್ಥಕವಾಗಿಸಬಹುದೆಂದರು ಹಾಗೂ ಸಿಯೋನ್ ಆಶ್ರಮದಲ್ಲಿ ಯಾವುದೇ ಜಾತಿ-ಮತ, ಬೇಧ-ಭಾವವಿಲ್ಲದೇ ಬೇರೆ ಬೇರೆ ಧರ್ಮದ ಮೂವರು ಹಿರಿಯ ನಾಗರಿಕರನ್ನು ಗುರುತಿಸಿ, ಪ್ರತಿ ವರ್ಷ ಸನ್ಮಾನಿಸಲಾಗುವುದೆಂದು ತಿಳಿಸಿದರು.

ಬೆಳ್ತಂಗಡಿ ತಾಲೂಕಿನ ಹಿರಿಯ ನಾಗರಿಕರಾದ ನಿಡ್ಲೆ ಗ್ರಾಮದ ಪಿಲಿಕಜೆ ಎಂಬಲ್ಲಿ ವಾಸವಾಗಿರುವ ಶ್ರೀಮತಿ ಚಿನ್ನಮ್ಮ, ಮಾಲಾಡಿ ಗ್ರಾಮದ ಮಾರ್ನಿಂಗ್ ಸ್ಟಾರ್ ಎಂಬಲ್ಲಿ ವಾಸವಾಗಿರುವ ಜೆರಾಲ್ಡ್ ಮೋರಸ್ ಹಾಗೂ ಕೊಲ್ಪೆದಬೈಲು ಎಂಬಲ್ಲಿ ವಾಸವಾಗಿರುವ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಇವರುಗಳನ್ನು ಪ್ರಮಾಣ ಪತ್ರ, ಫಲಪುಷ್ಪಗಳೊಂದಿಗೆ, ಪೇಟಾ ಶಾಲು ಹೊದಿಸಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಸಂಸ್ಥೆಯ ವೈದ್ಯಾಧಿಕಾರಿ ಡಾ.ಶಿವಾನಂದ ಸ್ವಾಮಿ, ರೋಸರಿ ಡಿವೋಟರ್ ಬೇಬಿ, ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ., ಲೆಕ್ಕಾಧಿಕಾರಿ ಶ್ರೀಮತಿ ಸೌಮ್ಯ ಯು.ಪಿ. ಹಾಗೂ ಅಶ್ರಮನಿವಾಸಿಯಾದ ಅನಿಲ್ ಉಪಸ್ಥಿತರಿದ್ದರು.


ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮ ನಿವಾಸಿಗಳೆಲ್ಲರೂ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿ ಶ್ರೀಮತಿ ದಿನವತಿಯವರು ಕಾರ್ಯಕ್ರಮ ನಿರೂಪಿಸಿದರು. ವೈದ್ಯಾಧಿಕಾರಿ ಡಾ.ಶಿವಾನಂದ ಸ್ವಾಮಿ ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ಆಶಾ ವಂದಿಸಿದರು.

Related posts

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

Suddi Udaya

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ನೂತನ ಖಾಝಿ ಪದಗ್ರಹಣ ಸಮಾರಂಭ

Suddi Udaya

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya
error: Content is protected !!