22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

ಉಜಿರೆ : ಕುಂಟಿನಿ‌ ನಿವಾಸಿ ನಿವೃತ್ತ ವಿದೇಶಿ ಉದ್ಯೋಗಿ ಕತಾರ್ ಮುಹಮ್ಮದ್ ಕುಂಞಿ (67ವ) ಅವರು ಅ.3 ರಂದು ಕುಂಟಿನಿ ಮಸ್ಜಿದ್ ನಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರು ನಮಾಝ್ ಗಾಗಿ ಮಸ್ಜಿದ್ ಗೆ ತೆರಳಿದ್ದವರು ಅಲ್ಲಿಯ ಹಠಾತ್ತನೇ ಹೃದಯಾಘಾತವಾಗಿ ಕೊನೆಯುಸಿರೆಳೆದರು. ತಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ವೈದ್ಯರು ಸಾವನ್ನಪ್ಪಿರುವ ಬಗ್ಗೆ ಖಚಿತಪಡಿಸಿದರು.

ವಿದೇಶದ ಕತಾರ್ ಕ್ರೀಡಾ ಘಟಕವಾದ ಫಿಫಾ ಅಸೋಸಿಯೇಷನ್ ನಲ್ಲಿ ಸುದೀರ್ಘ 30 ವರ್ಷ ಸೇವೆ ಸಲ್ಲಿಸಿ ಕೆಲ ವರ್ಷಗಳ ಹಿಂದೆ ಊರಿಗೆ ಮರಳಿದ್ದರು. ಲಾಯಿಲ ಗ್ರಾ.ಪಂ ಮಾಜಿ ಸದಸ್ಯರಾಗಿದ್ದ ಅವರು ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಸೇವೆಯಲ್ಲಿದ್ದರು. ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ಇದರ ನಿರ್ಮಾಣ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿದ್ದ‌ ಅವರು ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷರೂ ಆಗಿದ್ದಾರೆ. ಸಮಾಜ ಸೇವಕರಾಗಿದ್ದ ಅವರು ಕತಾರ್ ಮುಸ್ಲಿಂ ಅಸೋಸಿಯೇಷನ್ ಸಂಘಟನೆಯ ಹೆಸರಿನಲ್ಲಿ ಬೆಳ್ತಂಗಡಿ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆಯಾಗಿ ನೀಡುವಲ್ಲಿ ಪ್ರಮುಖ ಕಾರಣಕರ್ತರಾಗಿದ್ದರು.

ಮೃತರು ಪತ್ನಿ ಖತೀಜಮ್ಮ, ಏಳು ಪುತ್ರರು, ಓರ್ವೆ ಹೆಣ್ಣು ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

Suddi Udaya

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ

Suddi Udaya

ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!