September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಚೆಂಡೆ ತರಬೇತಿ ಉದ್ಘಾಟನೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಚೆಂಡೆ ತರಬೇತಿ ಉದ್ಘಾಟನಾ ಕಾರ್ಯಕ್ರಮವನ್ನು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ನಡೆಸಲಾಯಿತು.

ಕಾರ್ಯಕ್ರಮವನ್ನು ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ಕಾರ್ಯಕ್ರಮನ್ನು ಉದ್ಘಾಟಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಚೆಂಡೆ ತರಬೇತಿಯ ಮೂಲಕ ಮಹಿಳೆಯರು ಇನ್ನಷ್ಟು ಮುಂದೆ ಬರಲಿ ಎಂದು ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಯಶೋಧರ ರವರು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಮೂಲಕ ನಡೆಯುವಂತಹ ಕಾರ್ಯಕ್ರಮಗಳ ಬಗ್ಗೆ ತಿಳಿಸುತ್ತಾ ಚೆಂಡೆ ತರಬೇತಿಯು ವೃತ್ತಿಯೊಂದಿಗೆ ಸಂಸ್ಕಾರ ಸಂಸ್ಕೃತಿಯನ್ನು ನೀಡಲಿ ಎಂದರು.

ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀಮತಿ ಪುಷ್ಪಾವತಿಯವರು ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಚೆಂಡೆ ತರಬೇತಿಯ ಮೂಲಕ ನಮ್ಮ ಊರಿನ ಮಹಿಳೆಯರು ಮುಂದೆ ಬರಲು ಉತ್ತಮ ವೇದಿಕೆಯಾಗಿದ್ದು ತರಬೇತಿಯಲ್ಲಿ ಎಲ್ಲರೂ ಉತ್ತಮ ರೀತಿಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು,.

ತರಬೇತಿ ಶಿಕ್ಷಕ ಉಮೇಶ್ ರವರಿಗೆ ತರಬೇತಿಯನ್ನು ನೆರವೇರಿಸಿ ಕೊಡುವಂತೆ ವೇದಿಕೆಯಲ್ಲಿರುವ ಗಣ್ಯರಿಂದ ಫಲತಾಂಬೂಲ ನೀಡಲಾಯಿತು. ಉಮೇಶ್ ರವರು ತರಬೇತಿಯ ಸಮಯ ಮತ್ತು ನಿಯಮ ಪಾಲನೆಯ ಬಗ್ಗೆ ಮಾಹಿತಿ ನೀಡಿದರು. ಸೇವಾಪ್ರತಿನಿಧಿ ಪ್ರೇಮ ಸ್ವಾಗತಿಸಿ, ಜ್ಞಾನವಿಕಾಸ ಸಮನ್ವಯಧಿಕಾರಿ ಮಧುರಾ ವಸoತ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ನಾರಾವಿ ಅಂಗನವಾಡಿ ಶಿಕ್ಷಕಿ ಸುಮಿತ್ರಾ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!