ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಅತ್ಯಂತ ಗೌರವದಿಂದ ನೆರವೇರಿಸಲಾಯಿತು.
ಇಂತಹ ಸೇವಾ ಮನೋಭಾವವನ್ನು ಮುಂದುವರಿಸಿಕೊಂಡು ಹೋಗಲು ಎಲ್ಲ ಗ್ರಾಮಸ್ಥರು ಹಾಗೂ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ, ನಮ್ಮ ಗ್ರಾಮ ಇನ್ನಷ್ಟು ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತದೆ. ಆದ್ದರಿಂದ ಎಲ್ಲರೂ ಸಹಕರಿಸಬೇಕೆಂದು ಪ್ರಾಸ್ತಾವಿಕ ಭಾಷಣದಲ್ಲಿ ಅಬ್ದುಲ್ ರಜಾಕ್ ರವರು ವಿನಂತಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ, ಗ್ರಾ.ಪಂ. ಉಪಾಧ್ಯಕ್ಷೆ ಪುಷ್ಪ, ಸದಸ್ಯರಾದ ಶೇಖರ್ ಪೂಜಾರಿ ಉಪಸ್ಥಿತರಿದ್ದರು.











