37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

ಕೊಕ್ಕಡ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೊಕ್ಕಡ ಮಂಡಲದ ವಿಜಯದಶಮಿ ಉತ್ಸವವು ಕೊಕ್ಕಡ ಶ್ರೀರಾಮ ಸೇವಾ ಮಂದಿರದಲ್ಲಿ ಕೊಕ್ಕಡ ಮತ್ತು ಪಟ್ರಮೆ ಗ್ರಾಮಗಳನ್ನೊಳಗೊಂಡ ಕೊಕ್ಕಡ ಮಂಡಲದ ಸ್ವಯಂಸೇವಕರು ಮತ್ತು ಸಜ್ಜನ ಬಂಧುಗಳು, ಮಾತಾ ಭಗಿನಿಯರು ಪಾಲ್ಗೊಳ್ಳುವುದರ ಮೂಲಕ ನಡೆಯಿತು.

ಕೊಕ್ಕಡ ಮಂಡಲದ ಸ್ವಯಂಸೇವಕರು ಸಂಘದ ಗಣವೇಶವನ್ನು ಧರಿಸಿ ಬಂದು ಸಂಘದ ಉಪವಿಷ್ಟ ವ್ಯಾಯಮದಲ್ಲಿ ತೊಡಗಿಸಿಕೊಂಡರು. ವಿಜಯದಶಮಿ ಉತ್ಸವದ ಅಧ್ಯಕ್ಷತೆಯನ್ನು ನಿವೃತ್ತ ಸೇನಾನಿ ಶ್ರೀಜಿತ್ ಪಡ್ಡಡ್ಕ ವಹಿಸಿದ್ದರು. ಬೌದ್ಧಿಕನ್ನು ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರಜ್ವಲ್ ಕಜೆ ಇವರು ನೆರವೇರಿಸಿಕೊಟ್ಟರು. ಮುಖ್ಯ ಶಿಕ್ಷಕ. ಮಹೇಶ್, ಪ್ರಾರ್ಥನೆ ತೇಜಸ್, ಸ್ವಾಗತ ಮತ್ತು ಪರಿಚಯ ಪುರಂದರ ಕಡೀರ, ಹಾಗೂ ಧನ್ಯವಾದವನ್ನು ಹರೀಶ್ ಅಪ್ರೋಡಿ ಇವರುಗಳು ನೆರವೇರಿಸಿದರು. ವೈಯಕ್ತಿಕ ಗೀತೆ ಯನ್ನು ವಿಕ್ರಮ್ ಮರುವಂತಿಲ ಹಾಡಿದರು.
ಅಮೃತವಚನವನ್ನು ಶ್ರೇಯಸ್ ಕಡೀರ ವಾಚಿಸಿದರು. ಮಂಡಲ ಕಾರ್ಯವಾಹ ಸುದರ್ಶನ್ ಹಿತ್ತಿಲು ನಿರೂಪಿಸಿದರು.

Related posts

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ಅಳದಂಗಡಿ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ

Suddi Udaya

ರಾಜ್ಯಮಟ್ಟದ ಎಸ್ ಡಿ ಎಂ ಬಿ.ವೊಕ್ ಉತ್ಸವ : ವಾಣಿ ಪ. ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!