22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

ಕೊಕ್ಕಡ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೊಕ್ಕಡ ಮಂಡಲದ ವಿಜಯದಶಮಿ ಉತ್ಸವವು ಕೊಕ್ಕಡ ಶ್ರೀರಾಮ ಸೇವಾ ಮಂದಿರದಲ್ಲಿ ಕೊಕ್ಕಡ ಮತ್ತು ಪಟ್ರಮೆ ಗ್ರಾಮಗಳನ್ನೊಳಗೊಂಡ ಕೊಕ್ಕಡ ಮಂಡಲದ ಸ್ವಯಂಸೇವಕರು ಮತ್ತು ಸಜ್ಜನ ಬಂಧುಗಳು, ಮಾತಾ ಭಗಿನಿಯರು ಪಾಲ್ಗೊಳ್ಳುವುದರ ಮೂಲಕ ನಡೆಯಿತು.

ಕೊಕ್ಕಡ ಮಂಡಲದ ಸ್ವಯಂಸೇವಕರು ಸಂಘದ ಗಣವೇಶವನ್ನು ಧರಿಸಿ ಬಂದು ಸಂಘದ ಉಪವಿಷ್ಟ ವ್ಯಾಯಮದಲ್ಲಿ ತೊಡಗಿಸಿಕೊಂಡರು. ವಿಜಯದಶಮಿ ಉತ್ಸವದ ಅಧ್ಯಕ್ಷತೆಯನ್ನು ನಿವೃತ್ತ ಸೇನಾನಿ ಶ್ರೀಜಿತ್ ಪಡ್ಡಡ್ಕ ವಹಿಸಿದ್ದರು. ಬೌದ್ಧಿಕನ್ನು ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರಜ್ವಲ್ ಕಜೆ ಇವರು ನೆರವೇರಿಸಿಕೊಟ್ಟರು. ಮುಖ್ಯ ಶಿಕ್ಷಕ. ಮಹೇಶ್, ಪ್ರಾರ್ಥನೆ ತೇಜಸ್, ಸ್ವಾಗತ ಮತ್ತು ಪರಿಚಯ ಪುರಂದರ ಕಡೀರ, ಹಾಗೂ ಧನ್ಯವಾದವನ್ನು ಹರೀಶ್ ಅಪ್ರೋಡಿ ಇವರುಗಳು ನೆರವೇರಿಸಿದರು. ವೈಯಕ್ತಿಕ ಗೀತೆ ಯನ್ನು ವಿಕ್ರಮ್ ಮರುವಂತಿಲ ಹಾಡಿದರು.
ಅಮೃತವಚನವನ್ನು ಶ್ರೇಯಸ್ ಕಡೀರ ವಾಚಿಸಿದರು. ಮಂಡಲ ಕಾರ್ಯವಾಹ ಸುದರ್ಶನ್ ಹಿತ್ತಿಲು ನಿರೂಪಿಸಿದರು.

Related posts

ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ

Suddi Udaya

ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯಿಂದ ಡಾ.ಡಿ ಹೆಗ್ಗಡೆಯವರ ಭೇಟಿ

Suddi Udaya

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

Suddi Udaya

ಮಿತ್ತಬಾಗಿಲು ಬಿ.ಕೆ ದೇವರಾಯರಿಗೆ ರೈತಪೀಠ ಪ್ರಶಸ್ತಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

“ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ: ಸುಮಂತ್ ಕುಮಾರ್ ಜೈನ್

Suddi Udaya
error: Content is protected !!