25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

ಕೊಕ್ಕಡ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೊಕ್ಕಡ ಮಂಡಲದ ವಿಜಯದಶಮಿ ಉತ್ಸವವು ಕೊಕ್ಕಡ ಶ್ರೀರಾಮ ಸೇವಾ ಮಂದಿರದಲ್ಲಿ ಕೊಕ್ಕಡ ಮತ್ತು ಪಟ್ರಮೆ ಗ್ರಾಮಗಳನ್ನೊಳಗೊಂಡ ಕೊಕ್ಕಡ ಮಂಡಲದ ಸ್ವಯಂಸೇವಕರು ಮತ್ತು ಸಜ್ಜನ ಬಂಧುಗಳು, ಮಾತಾ ಭಗಿನಿಯರು ಪಾಲ್ಗೊಳ್ಳುವುದರ ಮೂಲಕ ನಡೆಯಿತು.

ಕೊಕ್ಕಡ ಮಂಡಲದ ಸ್ವಯಂಸೇವಕರು ಸಂಘದ ಗಣವೇಶವನ್ನು ಧರಿಸಿ ಬಂದು ಸಂಘದ ಉಪವಿಷ್ಟ ವ್ಯಾಯಮದಲ್ಲಿ ತೊಡಗಿಸಿಕೊಂಡರು. ವಿಜಯದಶಮಿ ಉತ್ಸವದ ಅಧ್ಯಕ್ಷತೆಯನ್ನು ನಿವೃತ್ತ ಸೇನಾನಿ ಶ್ರೀಜಿತ್ ಪಡ್ಡಡ್ಕ ವಹಿಸಿದ್ದರು. ಬೌದ್ಧಿಕನ್ನು ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರಜ್ವಲ್ ಕಜೆ ಇವರು ನೆರವೇರಿಸಿಕೊಟ್ಟರು. ಮುಖ್ಯ ಶಿಕ್ಷಕ. ಮಹೇಶ್, ಪ್ರಾರ್ಥನೆ ತೇಜಸ್, ಸ್ವಾಗತ ಮತ್ತು ಪರಿಚಯ ಪುರಂದರ ಕಡೀರ, ಹಾಗೂ ಧನ್ಯವಾದವನ್ನು ಹರೀಶ್ ಅಪ್ರೋಡಿ ಇವರುಗಳು ನೆರವೇರಿಸಿದರು. ವೈಯಕ್ತಿಕ ಗೀತೆ ಯನ್ನು ವಿಕ್ರಮ್ ಮರುವಂತಿಲ ಹಾಡಿದರು.
ಅಮೃತವಚನವನ್ನು ಶ್ರೇಯಸ್ ಕಡೀರ ವಾಚಿಸಿದರು. ಮಂಡಲ ಕಾರ್ಯವಾಹ ಸುದರ್ಶನ್ ಹಿತ್ತಿಲು ನಿರೂಪಿಸಿದರು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

Suddi Udaya

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

Suddi Udaya
error: Content is protected !!