22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಂಡೊದ ಕಲೊಟ್ಟು ಬಿರುವೆರೆ ಗೊಬ್ಬು

ಲಾಯಿಲ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಲಾಯಿಲ ಮಹಿಳಾ ಬಿಲ್ಲವ ವೇದಿಕೆ ಲಾಯಿಲ ಮತ್ತು ಯುವ ಬಿಲ್ಲವ ವೇದಿಕೆ ಲಾಯಿಲ ಇವರ ಸಂಯುಕ್ತ ಆಶ್ರಯದಲ್ಲಿ ಕಂಡೊದ ಕಲೊಟ್ಟು ಬಿರುವೆರೆ ಗೊಬ್ಬು ಎಂಬ ಕೆಸರಿನ ಕ್ರೀಡಾಕೂಟವು ಇತ್ತೀಚೆಗೆ ಲಾಯಿಲ ಗ್ರಾಮದ ಹಂದೆವೂರು ಬೊಟ್ಟು ಎಂಬಲ್ಲಿ ನಡೆಯಿತು.

ಬೆಳಿಗ್ಗೆ ಕೈಪ್ಲೋಡಿಯ ಕೃಷ್ಣಪ್ಪ ಪೂಜಾರಿಯವರು ದೀಪ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ನಂತರ ಕಂಬಳದ ಕೋಣಗಳನ್ನು ಬ್ಯಾಂಡ್ ವಾಲಗದ ಮೂಲಕ ಗದ್ದೆಗೆ ಇಳಿಸಿ, ಉಳುಮೆ ಮಾಡಿ, ಕೋಳಿ ಅಂಕದ ಪ್ರಾತಕ್ಷಿಕೆ ನಡೆಸಲಾಯಿತು. ಹಿರಿಯರಾದ ದರ್ಖಾಸು ಸಂಜೀವ ಪೂಜಾರಿಯವರು ಗದ್ದೆಗೆ ಹಾಲು, ತುಪ್ಪ, ಎಳನೀರನ್ನು ಎರೆಯುವ ಮೂಲಕ ಕೆಸರಿನ ಸ್ಪರ್ಧೆಗಳಿಗೆ ಚಾಲನೆ ನೀಡಿದರು.

ಮಧ್ಯಾಹ್ನ ಬಿ ಲಕ್ಷ್ಮಣ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಇದರ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಭಗೀರಥ ಜಿ., ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಸುವರ್ಣ, ಶ್ರೀಮತಿ ಸುಮತಿ ಪ್ರಮೋದ್, ಎಂ. ಕೆ. ಪ್ರಸಾದ್, ಗುರುರಾಜ್ ಗುರಿಪಳ್ಳ ಹಾಗೂ ಸಂಘದ ನಿರ್ದೇಶಕರು ಮತ್ತು ಗ್ರಾಮ ಪಂಚಾಯತ್ ಪ್ರತಿನಿಧಿಗಳು ಭಾಗವಹಿಸಿದ್ದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ವಸಂತ್ ಸುವರ್ಣ ಲಾಯಿಲ, ಬಹುಮಾನ ವಿತರಕರಾಗಿ ಶೈಲೇಶ್ ಆರ್. ಜೆ. ಭಾಗವಹಿಸಿದ್ದರು. ಕಾರ್ಯದರ್ಶಿ ಸೌಮ್ಯ ಲಾಯಿಲ ಸ್ವಾಗತಿಸಿ, ಸ್ನೇಕ್ ಅಶೋಕ್ ವಂದಿಸಿದರು. ಜಯಾನಂದ ಅಂಕಾಜೆಯವರು ನಿರೂಪಿಸಿದರು.

Related posts

ಮಚ್ಚಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಆಯ್ಕೆ

Suddi Udaya

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಸೇವೆ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

Suddi Udaya
error: Content is protected !!