37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಜಯ ದಶಮಿಯಂದು ಗೆಜ್ಜೆ ಗಿರಿಯಲ್ಲಿ ಒಂಬತ್ತನೇ ಮಹಾಸಭೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಡಳಿತ ಸಮಿತಿಯ ಒಂಬತ್ತನೇ ಮಹಾಸಭೆಯು ವಿಜಯ ದಶಮಿಯಂದು ಕ್ಷೇತ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿ ಮುಂದಿನ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಲಾಯಿತು. ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆಯವರು ಪ್ರಸ್ತಾವಿಸಿ ಸ್ವಾಗತಿಸಿದರು. ರವಿ ಪೂಜಾರಿ ಚಿಲಿಂಬಿ ಅಧ್ಯಕ್ಷತೆ ವಹಿಸಿ ನ. 23ರಂದು ಗೆಜ್ಜೆ ಗಿರಿಯಲ್ಲಿ ನಡೆಯುವ ವಸತಿ ಗ್ರಹಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸರ್ವರೂ ಭಾಗವಹಿಸಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ಗೌರವಾಧ್ಯಕ್ಷ ಜಯಂತ ನಡುಬೈಲು, ಉಪಾಧ್ಯಕ್ಷ ಉಲ್ಲಾಸ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್ ರವರು ಗತ ವರ್ಷದ ವರದಿಯನ್ನು ಯಾಚಿಸಿದರು. ಜೊತೆ ಕಾರ್ಯದರ್ಶಿಗಳಾದ ಡಾ. ಸಂತೋಷ್ ಬೈರಂಪಲ್ಲಿ ಜೈ ವಿಕ್ರಮ ಕಲ್ಲಾಪು ಹಾಜರಿದ್ದು ಕೋಶಾಧಿಕಾರಿ ಮೋಹನ ದಾಸ್ ಬಂಗೇರ ವಾಮಂಜೂರು ಲೆಕ್ಕಪತ್ರಗಳನ್ನು ಮಂಡಿಸಿದರು.
ಗಣ್ಯರಾದ ದುಬೈಯ ಸತೀಶ್ ಪೂಜಾರಿ ಬೆಳಪು, ಪ್ರಭಾಕರ್ ಕರ್ನಿರೆ , ದಕ್ಷಿಣ ಆಫ್ರಿಕದ ಸೋಮನಾಥ ಪೂಜಾರಿ, ಉಡುಪಿ ಗೋವಾದ ಚಂದ್ರಹಾಸ ಅಮೀನ್, ಶ್ರೀಮತಿ ಸುಜಿತಾ ವಿ ಬಂಗೇರ, ಸಂಜೀವ ಪೂಜಾರಿ ಬಿರುವ ಸೆಂಟರ್, ಪ್ರಾಮಲ್ ಕುಮಾರ್ ಕಾರ್ಕಳ, ಹರಿಶ್ಚಂದ್ರ ಅಮಿನ್ ಕಟಪಾಡಿ, ಶ್ರೀಕುಮಾರ್ ಮೂಡಬಿದ್ರಿ, ನಾರಾಯಣ ಮಚ್ಚಿನ, ನವೀನ್ ಅಮೀನ್ ಉಡುಪಿ, ನವೀನ್ ಸುವರ್ಣ ಸದೀಪ, ನವನೀತ್ ಹಿಂಗಾಣಿ, ನಾಗೇಶ್ ಪೂಜಾರಿ , ಜಯರಾಮ ಬಂಗೇರ, ಜಯ ರಾಮ ಪೂಜಾರಿ ಬೀಳುವಾಯಿ, ನಾಗೇಶ್ ಪೂಜಾರಿ, ಬೈಕಂಪಾಡಿ, ರಾಘವೇಂದ್ರ, ಹಾಜರಿದ್ದರು.

ಉಪಾಧ್ಯಕ್ಷ ದೀಪಕ್ ಕೋಟ್ಯಾನ್ ಧನ್ಯವಾದ ಸಮರ್ಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ ಹಾಗೂ ನಿರ್ದೆಶಕ ತರುಣ್ ಸುಧೀರ್ ದಂಪತಿ ಭೇಟಿ

Suddi Udaya

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 28ನೇ ಕ್ಷೇಮ ನಿಧಿ ಸಹಾಯಧನ

Suddi Udaya

ನಯನಾಡು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya
error: Content is protected !!