23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಜಯ ದಶಮಿಯಂದು ಗೆಜ್ಜೆ ಗಿರಿಯಲ್ಲಿ ಒಂಬತ್ತನೇ ಮಹಾಸಭೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಡಳಿತ ಸಮಿತಿಯ ಒಂಬತ್ತನೇ ಮಹಾಸಭೆಯು ವಿಜಯ ದಶಮಿಯಂದು ಕ್ಷೇತ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿ ಮುಂದಿನ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಲಾಯಿತು. ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆಯವರು ಪ್ರಸ್ತಾವಿಸಿ ಸ್ವಾಗತಿಸಿದರು. ರವಿ ಪೂಜಾರಿ ಚಿಲಿಂಬಿ ಅಧ್ಯಕ್ಷತೆ ವಹಿಸಿ ನ. 23ರಂದು ಗೆಜ್ಜೆ ಗಿರಿಯಲ್ಲಿ ನಡೆಯುವ ವಸತಿ ಗ್ರಹಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸರ್ವರೂ ಭಾಗವಹಿಸಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ಗೌರವಾಧ್ಯಕ್ಷ ಜಯಂತ ನಡುಬೈಲು, ಉಪಾಧ್ಯಕ್ಷ ಉಲ್ಲಾಸ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್ ರವರು ಗತ ವರ್ಷದ ವರದಿಯನ್ನು ಯಾಚಿಸಿದರು. ಜೊತೆ ಕಾರ್ಯದರ್ಶಿಗಳಾದ ಡಾ. ಸಂತೋಷ್ ಬೈರಂಪಲ್ಲಿ ಜೈ ವಿಕ್ರಮ ಕಲ್ಲಾಪು ಹಾಜರಿದ್ದು ಕೋಶಾಧಿಕಾರಿ ಮೋಹನ ದಾಸ್ ಬಂಗೇರ ವಾಮಂಜೂರು ಲೆಕ್ಕಪತ್ರಗಳನ್ನು ಮಂಡಿಸಿದರು.
ಗಣ್ಯರಾದ ದುಬೈಯ ಸತೀಶ್ ಪೂಜಾರಿ ಬೆಳಪು, ಪ್ರಭಾಕರ್ ಕರ್ನಿರೆ , ದಕ್ಷಿಣ ಆಫ್ರಿಕದ ಸೋಮನಾಥ ಪೂಜಾರಿ, ಉಡುಪಿ ಗೋವಾದ ಚಂದ್ರಹಾಸ ಅಮೀನ್, ಶ್ರೀಮತಿ ಸುಜಿತಾ ವಿ ಬಂಗೇರ, ಸಂಜೀವ ಪೂಜಾರಿ ಬಿರುವ ಸೆಂಟರ್, ಪ್ರಾಮಲ್ ಕುಮಾರ್ ಕಾರ್ಕಳ, ಹರಿಶ್ಚಂದ್ರ ಅಮಿನ್ ಕಟಪಾಡಿ, ಶ್ರೀಕುಮಾರ್ ಮೂಡಬಿದ್ರಿ, ನಾರಾಯಣ ಮಚ್ಚಿನ, ನವೀನ್ ಅಮೀನ್ ಉಡುಪಿ, ನವೀನ್ ಸುವರ್ಣ ಸದೀಪ, ನವನೀತ್ ಹಿಂಗಾಣಿ, ನಾಗೇಶ್ ಪೂಜಾರಿ , ಜಯರಾಮ ಬಂಗೇರ, ಜಯ ರಾಮ ಪೂಜಾರಿ ಬೀಳುವಾಯಿ, ನಾಗೇಶ್ ಪೂಜಾರಿ, ಬೈಕಂಪಾಡಿ, ರಾಘವೇಂದ್ರ, ಹಾಜರಿದ್ದರು.

ಉಪಾಧ್ಯಕ್ಷ ದೀಪಕ್ ಕೋಟ್ಯಾನ್ ಧನ್ಯವಾದ ಸಮರ್ಪಿಸಿದರು.

Related posts

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

Suddi Udaya

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya
error: Content is protected !!